ಭಾರತೀಯ ಸೇನೆ, ಕಾಶ್ಮೀರಿ ಪಂಡಿತರ ಬಗ್ಗೆ ಮಾತು: ವಿವಾದದಲ್ಲಿ ಸಾಯಿ ಪಲ್ಲವಿ; Boycott Virata Parvam ಟ್ರೆಂಡಿಂಗ್!

ನಟಿ ಸಾಯಿ ಪಲ್ಲವಿ ಭಾರತೀಯ ಸೇನೆ ಬಗ್ಗೆ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಸಂದರ್ಶನದಲ್ಲಿ ಮಾತನಾಡಿದ ಅವರು, ‘ಪಾಕಿಸ್ತಾನದ ಜನ ಭಾರತೀಯ ಭದ್ರತಾ ಪಡೆಗಳನ್ನು ಭಯೋತ್ಪಾದಕರು ಎಂದು ಭಾವಿಸುತ್ತಾರೆ. ಅದೇ ರೀತಿ ನಾವು ಕೂಡಾ ಪಾಕಿಸ್ತಾನದ…

ನಟಿ ಸಾಯಿ ಪಲ್ಲವಿ ಭಾರತೀಯ ಸೇನೆ ಬಗ್ಗೆ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಸಂದರ್ಶನದಲ್ಲಿ ಮಾತನಾಡಿದ ಅವರು, ‘ಪಾಕಿಸ್ತಾನದ ಜನ ಭಾರತೀಯ ಭದ್ರತಾ ಪಡೆಗಳನ್ನು ಭಯೋತ್ಪಾದಕರು ಎಂದು ಭಾವಿಸುತ್ತಾರೆ. ಅದೇ ರೀತಿ ನಾವು ಕೂಡಾ ಪಾಕಿಸ್ತಾನದ ಬಗ್ಗೆ ಯೋಚಿಸುತ್ತೇವೆ. ಏಕೆಂದರೆ 2 ಕಡೆ ಸಾವು-ನೋವು ಆಗುತ್ತಿದೆ’ ಎಂದಿದ್ದಾರೆ.

ಈ ಹೇಳಿಕೆಗೆ ಕೆಂಡಾಮಂಡಲವಾಗಿರುವ ನೆಟ್ಟಿಗರು, ರಕ್ಷಣಾತ್ಮಕ ತಂಡಕ್ಕೂ, ಆಕ್ರಮಣಕಾರಿ ತಂಡಕ್ಕೂ ವ್ಯತ್ಯಾಸವಿದೆ. ಮೊದಲು ಇತಿಹಾಸ ತಿಳಿದುಕೊಳ್ಳಿ ಎಂದು ಜರಿದಿದ್ದಾರೆ.

ನಟಿ ಸಾಯಿಪಲ್ಲವಿ ವಿರುದ್ಧ ಆಕ್ರೋಶ:

Vijayaprabha Mobile App free

ಇನ್ನು, ಹಿಂದೂಗಳು ಮತ್ತು ಕಾಶ್ಮೀರಿ ಪಂಡಿತರನ್ನು ಅವಮಾನಿಸಿದ್ದಾರೆ ಎಂದು ನೆಟಿಜನ್‌ಗಳು ನಟಿ ಸಾಯಿಪಲ್ಲವಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ಹೀಗಾಗಿ, ಅವರ ಅಭಿನಯದ ವಿರಾಟಪರ್ವಂ ಸಿನಿಮಾವನ್ನು ಬಹಿಷ್ಕರಿಸಲು #BoycottVirataParvam ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಮಾಡುತ್ತಿದ್ದಾರೆ.

ಹೌದು, ‘ಜೈಶ್ರೀರಾಮ್ ಎಂದು ಕೂಗುತ್ತಾ ದನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮುಸ್ಲಿಂ ಎಂಬ ಕಾರಣಕ್ಕೆ ಹೊಡೆದು ಕೊಂದಿದ್ದು ಮತ್ತು ಕಾಶ್ಮೀರ ಪಂಡಿತರ ನರಮೇಧಕ್ಕೂ ಯಾವುದೇ ವ್ಯತ್ಯಾಸ ಇಲ್ಲ’ ಎಂದು ನಟಿ ಸಾಯಿಪಲ್ಲವಿ ಹೇಳಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.