ಇಂದು ಬೆಂಗಳೂರು VS ಪಂಜಾಬ್ ನಡುವೆ ಪಂದ್ಯ: ನಟ ಕಿಚ್ಚ ಸುದೀಪ್ ಹೇಳಿದ್ದೇನು?

ಬೆಂಗಳೂರು : ಇಂದು ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವೆ  ನಡೆಯಲಿರುವ ಹೈ ವೋಲ್ಟೇಜ್ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಈ ವೇಳೆ…

Kiccha sudeepa vijayaprabha

ಬೆಂಗಳೂರು : ಇಂದು ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವೆ  ನಡೆಯಲಿರುವ ಹೈ ವೋಲ್ಟೇಜ್ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.

ಈ ವೇಳೆ ಟ್ವೀಟ್ ಮಾಡಿರುವ ನಟ ಕಿಚ್ಚ ಸುದೀಪ್, ‘ಇಂದಿನ ಪಂದ್ಯವು ಕರ್ನಾಟಕದ ಕ್ರಿಕೆಟ್ ಪ್ರಿಯರಿಗೆ ಬಹಳ ಕಠಿಣವಾಗಲಿದೆ. ಯಾಕೆಂದರೆ ಒಂದು ಕಡೆ ನಮ್ಮೂರಿನ ತಂಡ ಆರ್‌ಸಿಬಿ. ಎದುರಾಳಿಯಾಗಿ ಪಂಜಾಬ್ (ಹೆಚ್ಚು ಕರ್ನಾಟಕದ ಆಟಗಾರರು) ಆಡುತ್ತಿದ್ದಾರೆ. ಆದ್ದರಿಂದ ಹಿಂದೆ ಕುಳಿತುಕೊಂಡು ನಾವು  ಆಟವನ್ನು ನೋಡಿ ಎಂಜಾಯ್ ಮಾಡಬೇಕಾದ ಸಮಯ ಅಷ್ಟೇ’ ಎಂದು ನಟ ಕಿಚ್ಚ ಸುದೀಪ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.