ಇತ್ತೀಚೆಗೆ ಬರ್ಬರವಾಗಿ ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಅವರ ಮನೆಗಳಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ಪ್ರವೀಣ್ ಕುಟುಂಬಕ್ಕೆ ಸಂತ್ವಾನ ಹೇಳಿದ್ದೇನೆ. ಕುಟುಂಬ ಸಂಪೂರ್ಣ ಕಷ್ಟದಲ್ಲಿ ಇರೋದು ಮಾತುಕತೆ ಬಳಿಕ ನನಗೆ ತಿಳಿಸಿದೆ. ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಲು ಆಗದೇ ತನಿಖಾ ಅಧಿಕಾರ ಹಸ್ತಾಂತರ ಮಾಡಿದೆ. ಸರ್ಕಾರದ ಬೇಜವಾಬ್ದಾರಿ ತೀರ್ಮಾನ ಇದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹೆಚ್ ಡಿಕೆಗೆ ಜೆಡಿಎಸ್ ನಾಯಕ ಬಿಎಂ ಫಾರೂಕ್ ಸೇರಿದಂತೆ ಜೆಡಿಎಸ್ ಮುಖಂಡರು ಸಾಥ್ ನೀಡಿದರು. ಇದೇ ವೇಳೆ ಕಳೆದ ವಾರ, ಕೇವಲ ಪ್ರವೀಣ್ ಮನೆಗೆ ಮಾತ್ರ ಭೇಟಿ ನೀಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ನಡೆ ವಿರುದ್ಧ ಹೆಚ್ ಡಿಕೆ ಕಿಡಿ ಕಾರಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹತ್ಯೆಗೆ ಗುರಿಯಾಗಿದ್ದ ಯುವಕ ಮಸೂದ್ ಅವರ ಕಳಂಜದ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದೆ. ಈ ಸಂದರ್ಭದಲ್ಲಿ @JanataDal_S ಪಕ್ಷದಿಂದ 5 ಲಕ್ಷ ರೂ. ಮೊತ್ತದ ನೆರವಿನ ಚೆಕ್ ಹಸ್ತಾಂತರ ಮಾಡಲಾಯಿತು.1/2 pic.twitter.com/iP43qhhBEP
— H D Kumaraswamy (@hd_kumaraswamy) August 1, 2022