ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಮಲೆನಾಡಿನ ಭಾಗದಲ್ಲಿ ಇಂದಿನಿಂದ ಜುಲೈ 9 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹೌದು, ಕಾರವಾರ, ಮಂಗಳೂರು, ಹೊನ್ನಾವರ ಹಾಗೂ ಗೋಕರ್ಣ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಬೆಂಗಳೂರು, ಬಾದಾಮಿ, ಬೆಳಗಾವಿ, ಬೀದರ್, ಬಳ್ಳಾರಿ, ಚಿತ್ರದುರ್ಗ, ಗದಗ, ಹಂಪಿ, ಧಾರವಾಡ, ಮಂಡ್ಯ, ಮೈಸೂರು, ಕಲಬುರಗಿ, ರಾಯಚೂರು, ವಿಜಯಪುರದ ಸುತ್ತಮುತ್ತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.