ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ ಚಿನ್ನ ಕದ್ದ ಭೂಪ: ಕದ್ದ ಮಾಲು ಪಡೆದ ಗೆಳೆಯರು ಜೈಲು ಪಾಲು

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯ್ದಂತೆ ಇಲ್ಲೊಬ್ಬ ಭೂಪ ತಾನು ಕೆಲಸ ಮಾಡುತ್ತಿದ್ದ ಚಿನ್ನಾಭರಣ ಮಳಿಗೆಯಲ್ಲಿಯೇ ಮಾಲೀಕರಿಗೆ ಗೊತ್ತಾಗದಂತೆ ಒಡವೆಯನ್ನು ಕದ್ದು ಗೆಳೆಯರಿಗೆ ಕೊಡುತ್ತಿದ್ದ. ಕದ್ದಿರುವ ಬಂಗಾರ ಸ್ವೀಕರಿಸಿದ್ದ ತಪ್ಪಿಗೆ ಕಳ್ಳನ ಜತೆಗೆ ಇಬ್ಬರು ಸ್ನೇಹಿತರು ಸಹ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.

ರಾಜಸ್ಥಾನ ಮೂಲದ ವಿಷ್ಣು ದೇವಸಿ ಹಾಗೂ ದೇವಸಿ ಭದ್ರಿ ಬಂಧಿತರಾಗಿದ್ದು, ಆರೋಪಿಗಳಿಂದ 51.80 ಲಕ್ಷ ರು ಮೌಲ್ಯದ ಆಭರಣ ಜಪ್ತಿ ಮಾಡಲಾಗಿದೆ. ಇದೇ ಪ್ರಕರಣದಲ್ಲಿ ದೇವಸಿ ಸ್ನೇಹಿತ ರಾಹುಲ್ ಕುಮಾರ್‌ನನನ್ನು ಎಸ್‌.ಆರ್‌.ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಆತ ನೀಡಿದ ಮಾಹಿತಿ ಮೇರೆಗೆ ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆದಿದ್ದಾರೆ.

ಆಭರಣ ಅಡಿಟ್ ಮಾಡಿದಾಗ ಪ್ರಕರಣ ಬೆಳಕಿಗೆ:

ಕಳೆದ 2 ವರ್ಷಗಳಿಂದ ಎಸ್‌.ಆರ್‌.ನಗರದ 5ನೇ ಮುಖ್ಯರಸ್ತೆಯಲ್ಲಿರುವ ಗಣಪತಿ ದಾಸ್ ಅವರ ಚಿನ್ನಾಭರಣ ಮಳಿಗೆಯಲ್ಲಿ ರಾಹುಲ್ ಕೆಲಸ ಮಾಡುತ್ತಿದ್ದ. ಆ ವೇಳೆ ಮಾಲೀಕರಿಗೆ ಗೊತ್ತಾಗದಂತೆ ಸ್ವಲ್ಪ, ಸ್ವಲ್ಪ ಪ್ರಮಾಣದ ಆಭರಣ ಕದ್ದು ತನ್ನ ಸ್ನೇಹಿತರಾದ ವಿಷ್ಣು ದೇವಸಿ ಹಾಗೂ ಭದ್ರಿ ಮೂಲಕ ಆತ ವಿಲೇವಾರಿ ಮಾಡಿಸುತ್ತಿದ್ದ. ಕೆಲ ತಿಂಗಳ ಹಿಂದೆ ಅಂಗಡಿಯ ಆಭರಣದ ಅಡಿಟ್ ನಡೆಸಿದಾಗ ಈ ಕಳ್ಳತನ ಕೃತ್ಯ ಬೆಳಕಿಗೆ ಬಂದಿತ್ತು. ಆಗ ಗಣಪತಿ ದಾಸ್ ನೀಡಿದ ದೂರಿನ ಮೇರೆಗೆ ರಾಹುಲ್‌ನನ್ನು ಪೊಲೀಸರು ಬಂಧಿಸಿದ್ದರು. ಆದರೆ, ಕೃತ್ಯ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡಿದ್ದ ಇನ್ನುಳಿದ ಇಬ್ಬರು ಸಹಚರರನ್ನು 10 ತಿಂಗಳ ಬಳಿಕ ಎಸ್‌.ಆರ್‌.ನಗರ ಠಾಣೆ ಪೊಲೀಸರು ಬಲೆಗೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು