ಅರಿವು ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ

(Applications) 2024-25 ನೇ ಸಾಲಿನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅರಿವು ಯೋಜನೆಯಡಿಯಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು, ಅರ್ಜಿ…

(Applications) 2024-25 ನೇ ಸಾಲಿನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅರಿವು ಯೋಜನೆಯಡಿಯಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಮುಸ್ಲಿಂ  ಕ್ರಿಶ್ಚಿಯನ್  ಜೈನ್  ಬೌದ್ಧ  ಸಿಖ್ಖ್ ಪಾರ್ಸಿ ಜನಾಂಗದವರು ಈ ಯೋಜನೆಗೆ ಅರ್ಹರು.

ಅರ್ಹತೆ ಏನಿರಬೇಕು?; ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿದ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ/ ಸಿಇಟಿ, ನೀಟ್ ಮುಖಾಂತರ) ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ, ಎಂಬಿಎ, ಎಂಸಿಎ ಮತ್ತು ಎಲ್‍ಎಲ್‍ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಅರಿವು (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಹೇಗೆ?; https://kmdconline.karnataka.gov.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Vijayaprabha Mobile App free

ಭರ್ತಿ ಮಾಡಿದ ಅರ್ಜಿಯೊಂದಿಗೆ ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 04(ಪಾಸ್ ಪೋರ್ಟ್ ಸೈಜ್), ಸಿಇಟಿ/ನೀಟ್ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ಛಾಪಕಾಗದದಲ್ಲಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸುವುದು. ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಎಫ್‍ಎಂಸಿ ಕಾಲೇಜು ರಸ್ತೆ, ಮಡಿಕೇರಿ ತಾಲ್ಲೂಕು ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿ ಪಡೆಯಲು ಕಚೇರಿ ದೂರವಾಣಿ ಸಂಖ್ಯೆ 08272-201449 ನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್, 31

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.