ರಾಷ್ಟ್ರ ರಾಜಧಾನಿಯಲ್ಲಿ Air Quality ಇನ್ನೂ ಕಳಪೆ ಮಟ್ಟಕ್ಕೆ ಇಳಿಕೆ!

ನವದೆಹಲಿ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಕಾರ ರಾಷ್ಟ್ರ ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕವು 226ಕ್ಕೆ ಇಳಿದಿದ್ದು, ಕಳಪೆ ಎಂದು ಸೂಚಿಸಲಾಗಿದೆ. ಶನಿವಾರ ತೆಳುವಾದ ಹೊಗೆ ದೆಹಲಿಯ ಪೂರ್ತಿ ಆವರಿಸಿದೆ. ಅಕ್ಷರಧಾಮ ಮತ್ತು ಆನಂದ್…

ನವದೆಹಲಿ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಕಾರ ರಾಷ್ಟ್ರ ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕವು 226ಕ್ಕೆ ಇಳಿದಿದ್ದು, ಕಳಪೆ ಎಂದು ಸೂಚಿಸಲಾಗಿದೆ. ಶನಿವಾರ ತೆಳುವಾದ ಹೊಗೆ ದೆಹಲಿಯ ಪೂರ್ತಿ ಆವರಿಸಿದೆ.

ಅಕ್ಷರಧಾಮ ಮತ್ತು ಆನಂದ್ ವಿಹಾರ್ ಪ್ರದೇಶದಲ್ಲಿ ವಾಯು ಗುಣಮಟ್ಟ 334 ಇದ್ದು,‌ ಇದು ‘ಬಹಳ ಕಳಪೆ’ ಎಂದು ವರ್ಗೀಕರಿಸಲಾಗಿದೆ. AIIMS ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 253, ಇಂಡಿಯಾ ಗೇಟ್‌ನಲ್ಲಿ 251ಕ್ಕೆ ಇಳಿದಿದ್ದು, ಇದನ್ನು ‘ಕಳಪೆ’ ಎಂದು ವರ್ಗೀಕರಿಸಲಾಗಿದೆ. ಕಳೆದ ಎರಡು ದಿನಗಳಿಂದ ಅಕ್ಷರಧಾಮ ಪ್ರದೇಶದ ಬಳಿ ಮಾಲಿನ್ಯ ಪ್ರಮಾಣ ಹೆಚ್ಚಾಗಿದ್ದು, ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ನಿವಾಸಿ ಆಶಿಶ್ ಕುಮಾರ್ ಮೀನಾ ಹೇಳಿದರು.

ಕಳೆದ ಎರಡು ದಿನಗಳಲ್ಲಿ ಇಲ್ಲಿ ಮಾಲಿನ್ಯದ ಮಟ್ಟವು ಸಾಕಷ್ಟು ಹೆಚ್ಚಾಗಿದೆ. ಇದು ಗಂಟಲು ಮತ್ತು ಉಸಿರಾಟದ ಸಮಸ್ಯೆಗಳಿಗೆ ಕಾರಣವಾಗಿದೆ ಮತ್ತು ಕಣ್ಣುಗಳಲ್ಲಿ ಉರಿಯನ್ನು ಉಂಟುಮಾಡಿದೆ. ದೀಪಾವಳಿ ನಂತರ ಮಾಲಿನ್ಯದ ಮಟ್ಟವು ಹೆಚ್ಚಾಗುತ್ತದೆ. ಮಾಲಿನ್ಯದ ಮಟ್ಟವನ್ನು ನಿಯಂತ್ರಿಸಲು ಸರ್ಕಾರವು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.