‘ಕರ್ನಾಟಕದಲ್ಲಿ ಕಳೆದ ಒಂದು ವರ್ಷದಲ್ಲಿ 68,450 ಹೆಚ್ ಐವಿ ಪ್ರಕರಣ ದಾಖಲು’: ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 68,450 ಹೆಚ್ ಐವಿ ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ರಾಜ್ಯದಲ್ಲಿ 2.28 ಲಕ್ಷ ಹೆಚ್ ಐ ವಿ ಸೋಂಕಿತರು ಇದ್ದು, ಈ ಪೈಕಿ 1.91 ಲಕ್ಷ ಹೆಚ್ ಐ ವಿ…

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 68,450 ಹೆಚ್ ಐವಿ ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ರಾಜ್ಯದಲ್ಲಿ 2.28 ಲಕ್ಷ ಹೆಚ್ ಐ ವಿ ಸೋಂಕಿತರು ಇದ್ದು, ಈ ಪೈಕಿ 1.91 ಲಕ್ಷ ಹೆಚ್ ಐ ವಿ ಸೋಂಕಿತರು ಮಾತ್ರ ನಿಯಮಿತವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಆರೋಗ್ಯ ಸೌಧದಲ್ಲಿ ಹಮ್ಮಿಕೊಂಡಿದ್ದ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ ಹಾಗೂ ಹೆಚ್ ಐ ವಿ ತಡೆಗಟ್ಟಲು ತೀವ್ರಗೊಳಿಸಿದ ಐಇಸಿ ಪ್ರಚಾರಾಂದೋಲನ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತವು ಹೆಚ್ ಐ ವಿ/ಏಡ್ಸ್ ಜೊತೆಗೆ ಗಮನಾರ್ಹವಾದ ಆರೋಗ್ಯ ಸವಾಲನ್ನು ಎದುರಿಸುತ್ತಿದೆ.

ವಿಶ್ವದಲ್ಲಿ ಹೆಚ್ ಐ ವಿಯೊಂದಿಗೆ ಬದುಕುತ್ತಿರುವ ಎರಡನೇ ಅತಿ ಹೆಚ್ಚು ಜನರನ್ನು ಭಾರತ ಹೊಂದಿದೆ. ೨೦೩೦ರೊಳಗೆ ಎಚ್ ಐ ವಿ ಸೋಂಕು ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Vijayaprabha Mobile App free

ಜನಸಾಮಾನ್ಯರಲ್ಲಿ ಈ ಕುರಿತು ಅರಿವು ಮೂಡಿಸಲು ಎರಡು ತಿಂಗಳುಗಳ ಕಾಲ ರಾಜ್ಯಾದ್ಯಂತ ಪ್ರಚಾರಾಂದೋಲನ ಹಮ್ಮಿಕೊಳ್ಳಲಾಗುತ್ತಿದೆ. ಜನಸಾಮಾನ್ಯರಲ್ಲಿ ಹೆಚ್ ಐ ವಿ, ಎಸ್ ಐ ಟಿ ಸೋಂಕು ಹರಡುವ ಬಗ್ಗೆ ಅರಿವು ಮೂಡಿಸುವುದು, ಸುರಕ್ಷಿತ ಅಭ್ಯಾಸಗಳನ್ನು ಉತ್ತೇಜಿಸಿ, ಚಿಕಿತ್ಸಾ ಸೇವೆಗಳನ್ನು ಪಡೆಯುವಂತೆ ಪ್ರೇರೇಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.