ಸಹ ವ್ಯಾಪಾರಿಯೇ ಕದ್ದ ₹1.43 ಕೋಟಿ ಮೌಲ್ಯದ 2ಕೆ.ಜಿ. ಬಂಗಾರ ಜಪ್ತಿ, ಕಳ್ಳ ಬಂಧನ

ಸಿಂಧನೂರು: ಬರೋಬ್ಬರಿ 1.43 ಕೋಟಿ ರು. ಮೌಲ್ಯದ ಬಂಗಾರದ ಆಭರಣ ಕಳ್ಳತನ ಪ್ರಕರಣವನ್ನು ಸಿಂಧನೂರು ನಗರ ಪೊಲೀಸರು ಘಟನೆ ನಡೆದ ಒಂದು ವಾರದಲ್ಲಿಯೇ ವಿಶೇಷ ಕಾರ್ಯಾಚರಣೆ ನಡೆಸಿ ಭೇದಿಸಿದ್ದು, 2 ಕೆಜಿ 5 ತೊಲೆ ಬಂಗಾರದ ಆಭರಣಗಳ ಸಮೇತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ತಿಳಿಸಿದ್ದಾರೆ.

ನಗರದ ಶಹರ ಪೊಲೀಸ್ ಠಾಣೆಯಲ್ಲಿ  ಸುದ್ದಿಗೋಷ್ಠಿನಡೆಸಿ ಮಾತನಾಡಿ, ಸಿಕಂದರಬಾದ್ ಮೂಲದ ಇಬ್ಬರು ಬಂಗಾರ ವ್ಯಾಪಾರಿಗಳಾದ ದರಮೇಶ ಕುಮಾರ್ ಹಾಗೂ ನಿರ್ಮಲ್ ಕುಮಾರ ಜೈನ್ ಎನ್ನುವವರು ಕಮಿಷನ್ ಆಧಾರದ ಮೇಲೆ ಬಂಗಾರ ಮಾರಾಟ ಮಾಡಲು ಸಿಕಂದರಬಾದ್‌ನ ಬಂಗಾರ ವ್ಯಾಪಾರಿ ಭರತ್ ಕುಮಾರ್ ಎನ್ನುವವರಿಂದ ಕೋಟ್ಯಂತರ ರು. ಮೌಲ್ಯದ ಬಂಗಾರದ ಆಭರಣಗಳನ್ನು ಅಕ್ಟೋಬರ್ 12 ರಂದು ರಾಯಚೂರು ಜಿಲ್ಲೆಗೆ ತಂದಿದ್ದರು. ಅವರಿಬ್ಬರು ಸಿಂಧನೂರು ನಗರದ ಜೈನ್ ಧರ್ಮಶಾಲೆ ಕೋಣೆಯೊಂದರಲ್ಲಿ ಬಂಗಾರ ಸಮೇತ ವಾಸ್ತವ್ಯ ಹೂಡಿದ್ದರು. ಮರುದಿನ ಸಿಂಧನೂರಿನ ಹಲವೆಡೆ ಬಂಗಾರ ವ್ಯಾಪಾರ ಮಾಡುವ ಉದ್ದೇಶ ಹೊಂದಿದ್ದರು. ಇದ್ದ ಇಬ್ಬರ ಪೈಕಿ ಬಂಧಿತ ಆರೋಪಿ ನಿರ್ಮಲ್ ಕುಮಾರ್ ಜೈನ್ ಎಂಬಾತ ದರಮೇಶನಿಗೆ ತಿಳಿಯದಂತೆ ಎಲ್ಲಾ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಮಾನ್ವಿ ಪಟ್ಟಣದ ಬಾಲಾಜಿ ಕಂಪರ್ಟ್ಸ್ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದನು.

ನಂತರ ಬಂಗಾರದ ಮೂಲ ಮಾಲೀಕ ಭರತ್ ಕುಮಾರನಿಗೆ ಬಂಗಾರ ಕಳ್ಳತನವಾದ ವಿಷಯ ತಿಳಿದು ಸಿಂಧನೂರು ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನು. ಬಹುಕೋಟಿ ಮೌಲ್ಯದ ಬಂಗಾರದ ಕಳ್ಳತನದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಂಧನೂರು ಉಪವಿಭಾಗದ ಡಿವೈಎಸ್ಪಿ ಬಿ.ಎಸ್.ತಳವಾರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ, ವೈಜ್ಞಾನಿಕ ವಿಧಾನಗಳಿಂದ ಕಳ್ಳನನ್ನು ಪತ್ತೆ ಹಚ್ಚಿ ಆತನಿಂದ ಸಿಕಂದರಬಾದ್ ಬಂಗಾರ ಸೇರಿದಂತೆ ವಿವಿಧೆಡೆ ಕಳ್ಳತನ ಮಾಡಿದ್ದ ಒಟ್ಟು 2 ಕೆಜಿ 5 ತೊಲೆ ಬಂಗಾರದ ಆಭರಣ ಹಾಗೂ ₹40,150 ನಗದು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಬಂಗಾರದ ಆಭರಣಗಳ ಮೌಲ್ಯ 1 ಕೋಟಿ 43 ಲಕ್ಷದ 92 ಸಾವಿರ ರು. ಎಂದು ಅಂದಾಜಿಸಲಾಗಿದೆ ಎಂದು ವಿವರಿಸಿದರು.

Advertisement

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ಅಮ್ಮ ಎಂದರೆ ಕಿಚ್ಚನಿಗೆ ಕಣ್ಣಿಗೆ ಕಾಣುವ ದೇವರು!