ಹೋಟೆಲ್ ಗಳ ಕೆಲ ಕಳಪೆ ಆಹಾರಗಳ ವಿರುದ್ಧ ಕಾರ್ಯಾಚರಣೆಗಿಳಿದ ಆಹಾರ ಇಲಾಖೆ!

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಇದೀಗ ಕಳಪೆ ಗುಣಮಟ್ಟದ ತಿಂಡಿ, ಆಹಾರ ನೀಡುವ ಹೋಟೆಲ್​​ಗಳ ವಿರುದ್ಧ ಚಾಟಿ ಬೀಸಲು ಆರಂಭಿಸಿದೆ. ಕಳಪೆ ಗಣಮಟ್ಟದ ಆಹಾರ, ತಿಂಡಿ ಮಾರಟ ಹಾಗೂ ಸ್ವಚ್ಛತೆ ಕಾಪಾಡದ…

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಇದೀಗ ಕಳಪೆ ಗುಣಮಟ್ಟದ ತಿಂಡಿ, ಆಹಾರ ನೀಡುವ ಹೋಟೆಲ್​​ಗಳ ವಿರುದ್ಧ ಚಾಟಿ ಬೀಸಲು ಆರಂಭಿಸಿದೆ. ಕಳಪೆ ಗಣಮಟ್ಟದ ಆಹಾರ, ತಿಂಡಿ ಮಾರಟ ಹಾಗೂ ಸ್ವಚ್ಛತೆ ಕಾಪಾಡದ ಆರೋಪದಲ್ಲಿ ಹೋಟೆಲ್​​ಗಳಲ್ಲಿ ಮಾದರಿಗಳನ್ನು ಸಂಗ್ರಹಿಸಿದ್ದು ಪ್ರಯೋಗಾಲಯಕ್ಕೆ ಕಳುಹಿಸಿದೆ.

ಬಸ್ ನಿಲ್ದಾಣ ಹಾಗೂ ಬೀದಿ ಬದಿಯ ಹೋಟೆಲ್​​ಗಳ ಆಹಾರದ ಸ್ಯಾಂಪಲ್ಸ್ ಸಂಗ್ರಹಿಸಲು ಆಹಾರ ಇಲಾಖೆ ಮುಂದಾಗಿದೆ. ಬಸ್ ನಿಲ್ದಾಣ ಹಾಗೂ ಬೀದಿ ಬದಿಯ ಹೋಟೆಲ್​​ಗಳಲ್ಲಿ ತಿಂಡಿ ಆಹಾರ ಸೇರಿದಂತೆ ಹೋಟೆಲ್ ಗಳಲ್ಲಿ ಸ್ವಚ್ಛತೆ ಕಾಪಾಡುತ್ತಿಲ್ಲ. ಸ್ವಚ್ಛತೆ ಕೊರತೆಯಿಂದ ಆಹಾರ ಸೇವಿಸುವ ಗ್ರಾಹಕರ ಆರೋಗ್ಯದ ಮೇಲೆ ವೆತ್ಯರಿಕ್ತ ಪರಿಣಾಮ ಬೀರುತ್ತಿದೆ ಎಂಬ ಆರೋಪಗಳು ಕೇಳಿಬಂದ ಕಾರಣ ಅಂಥ ಹೋಟೆಲ್​​ಗಳಿಂದ ಆಹಾರಗಳ ಮಾದರಿ ಸಂಗ್ರಹಕ್ಕೆ ಮುಂದಾಗಿದೆ. ಈಗಾಗಲೇ ಬೆಂಗಳೂರಿನ ವಿವಿಧ ಭಾಗಗಳ 760 ಹೋಟೆಲ್​​​ಗಳಿಂದ ಸ್ಯಾಂಪಲ್ಸ್ ಕಲೆ ಹಾಕಿದ್ದು ಈ ಪೈಕಿ ಸ್ವಚ್ಛತೆ ಇಲ್ಲದ 128 ಹೋಟೆಲ್​​ಗಳಿಗೆ ನೋಟಿಸ್ ನೀಡಲಾಗಿದೆ. ಅಸುರಕ್ಷಿತ ಆಹಾರ ಹಾಗೂ ಸ್ವಚ್ಛತೆ ಕಾಪಾಡದ ಆರೋಪದಲ್ಲಿ ನೋಟಿಸ್ ನೀಡಲಾಗಿದೆ. ಇದರ ಬಳಿಕ ಈಗ ಎರಡನೇ ಹಂತದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಬೀದಿ ಬದಿಯ ಹೋಟೆಲ್​​ಗಳ ಆಹಾರದ ಸ್ಯಾಂಪಲ್ಸ್ ಪಡೆಯಲಾಗುತ್ತಿದೆ. ಸ್ಚಚ್ಛತೆಯ ಆಧಾರದ ಮೇಲೆ ಕ್ರಮವಹಿಸಲು ಮುಂದಾಗಿದೆ. ಸ್ವಚ್ಛತೆ ಕೊರತೆ ಹಾಗೂ ಅಸುರಕ್ಷಿತ ಆಹಾರ ನೀಡುವ ಹೋಟೆಲ್​​ಗಳಿಗೆ ನೋಟಿಸ್ ನೀಡಲು ಮುಂದಾಗಿದ್ದೇವೆ ಎಂದು ಆಯುಕ್ತ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯ ಆಯುಕ್ತ ಶ್ರೀನಿವಾಸ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.