Ganesha festivals: ಜ್ಞಾನ ಮತ್ತು ಸೃಷ್ಟಿಯ ರಚನೆಯ ಆರಂಭದಲ್ಲಿ ಮೊದಲು ಕಾಣಿಸಿ ಕೊಂಡ ದೇವರು ಗಣೇಶ ಹಾಗಾಗಿ ಯಾವುದೇ ಕಾರ್ಯದ ಆರಂಭದಲ್ಲಿ ಪ್ರಥಮ ಪೂಜೆಯನ್ನು ವಿನಾಯಕನಿಗೆ ಮಾಡಲಾಗುತ್ತದೆ.
ಪುರಾಣಗಳ ಪ್ರಕಾರ ಶಿವ ದೇವರು ಗಣಪನ ತುಂಡರಿಸಿದ ತಲೆಯನ್ನು ಆನೆಯ ತಲೆಯೊಂದಿಗೆ ಬದಲಾಯಿಸುತ್ತಾರೆ ಮತ್ತು ಮರಳಿ ಜೀವದಾನ ಮಾಡುತ್ತಾರೆ. ಶಿವನು ಗಣಪನಿಗೆ ವಿಶೇಷ ಶಕ್ತಿ ಸಾಮರ್ಥ್ಯಗಳನ್ನು ನೀಡಿ ಮೊದಲ ಪೂಜೆಯ ವರವನ್ನು ಗಣಪತಿಗೆ ಕರುಣಿಸುತ್ತಾರೆ. ಇದರ ನಂತರ ಪ್ರಥಮ ಪೂಜೆಯನ್ನು ಗಣಪನಿಗೆ ಮೊದಲು ಮಾಡಲಾಗುತ್ತದೆ.
ಭಾರತದಲ್ಲಿ ಸಾರ್ವಜನಿಕ ಗಣೇಶೋತ್ಸವ ಆರಂಭವಾದದ್ದು ಯಾವಾಗ?
ಲೋಕಮಾನ್ಯ ಬಾಲಗಂಗಾಧರ ತಿಲಕರು ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಜಾತಿಯ ಎಲ್ಲೆಗಳನ್ನು ಮೀರಿ ಜನರನ್ನು ಒಗ್ಗೂಡಿಸಲು ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಯ ಸಂಪ್ರದಾಯವನ್ನು ಪ್ರಾರಂಭಿಸಿದರು.
ಇದರ ಅಂಗವಾಗಿ 1894ರಲ್ಲಿ ಪುಣೆಯಲ್ಲಿ ಪ್ರಪ್ರಥಮ ಬಾರಿಗೆ ಸಾರ್ವಜನಿಕ ಗಣೇಶ ಉತ್ಸವದ ಹೆಸರಿನಲ್ಲಿ ಮಂಟಪಗಳಲ್ಲಿ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾಪಿಸಿ ನವರಾತ್ರಿಯಂದು ನಿಮಜ್ಜನ (ಗಣೇಶ ವಿಸರ್ಜನೆ) ಮಾಡಲಾಯಿತು. ನಂತರ ಈ ಶೈಲಿಯ ಆಚರಣೆ ಭಾರತದಾದ್ಯಂತ ಹರಡಿತು.
https://vijayaprabha.com/actor-darshan-way-out-of-jail/