ಬಿಸಿ ಬಿಸಿ ಸಾಂಬಾರ್‌ನಲ್ಲಿ ಸಿಕ್ತು ಸತ್ತ ಇಲಿ!

ನವದೆಹಲಿ: ಅಹಮದಾಬಾದ್‌ನ ಜನಪ್ರಿಯ ರೆಸ್ಟೋರೆಂಟ್ ಒಂದರ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಆಹಾರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಉಂಟಾಗಿದೆ. ನಿಕೋಲ್‌ನಲ್ಲಿರುವ ದೇವಿ ದೋಸೆ ರೆಸ್ಟೊರೆಂಟ್‌ನಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಗ್ರಾಹಕರಲ್ಲಿ…

ನವದೆಹಲಿ: ಅಹಮದಾಬಾದ್‌ನ ಜನಪ್ರಿಯ ರೆಸ್ಟೋರೆಂಟ್ ಒಂದರ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಆಹಾರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಉಂಟಾಗಿದೆ.

ನಿಕೋಲ್‌ನಲ್ಲಿರುವ ದೇವಿ ದೋಸೆ ರೆಸ್ಟೊರೆಂಟ್‌ನಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಗ್ರಾಹಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅಹಮದಾಬಾದ್‌ನ ದೇವಿ ದೋಸೆ ಫುಡ್ ಜಾಯಿಂಟ್‌ನಲ್ಲಿ ಗ್ರಾಹಕರಿಗೆ ನೀಡಿದ್ದ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಈ ಸಂಬಂಧ ಗ್ರಾಹಕರು ಅಮ್ದಾವದ್ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ)ಗೆ ಮಾಹಿತಿ ನೀಡಿದ್ದು, ಆರೋಗ್ಯ ಇಲಾಖೆಯು ರೆಸ್ಟೋರೆಂಟ್ ಮಾಲೀಕರಿಗೆ ನೋಟಿಸ್ ಜಾರಿ ಮಾಡಿದೆ.

ಎಎನ್‌ಐ ಜೊತೆ ಮಾತನಾಡಿದ ಎಎಮ್‌ಸಿಯ ಆಹಾರ ಸುರಕ್ಷತಾ ಅಧಿಕಾರಿ ಭವಿನ್ ಜೋಶಿ, ಅಹಮದಾಬಾದ್ ಕಾರ್ಪೊರೇಷನ್‌ನ ಎಲ್ಲ ವ್ಯಾಪಾರಸ್ಥರು ಗ್ರಾಹಕರಿಗೆ ತಾವು ನೀಡುವ ಆಹಾರ ಪದಾರ್ಥಗಳ ವಿಚಾರದಲ್ಲಿ ಬಹಳ ಜಾಗರೂಕರಾಗಿರಲು ಮನವಿ ಮಾಡುತ್ತೇನೆ. ಇದರಿಂದ ಇಂತಹ ಘಟನೆಗಳನ್ನು ತಪ್ಪಿಸಬಹುದು ಎಂದಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.