ಇಂದಿನಿಂದ 3ದಿನ ಉಡುಪಿ ಕೃಷ್ಣಮಠದಲ್ಲಿ 51ನೇ ಪ್ರಾಚ್ಯವಿದ್ಯಾ ಸಮ್ಮೇ‍ಳನ: ಬಾಬಾ ರಾಮ್‌ದೇವ್‌ ಚಾಲನೆ

ಉಡುಪಿ: ಭಾರತೀಯ ವಿದ್ವತ್ ಪರಿಷತ್ ವತಿಯಿಂದ ಕೃಷ್ಣಮಠದ ರಾಜಾಂಗಣದಲ್ಲಿ ಅ.24ರಿಂದ (ಇಂದು) 3 ದಿನಗಳ ಕಾಲ ನಡೆಯುವ 51ನೇ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನವನ್ನು ಯೋಗಗುರು ಬಾಬಾ ರಾಮ್ ದೇವ್ ಬೆಳಗ್ಗೆ 10 ಗಂಟೆಗೆ…

ಉಡುಪಿ: ಭಾರತೀಯ ವಿದ್ವತ್ ಪರಿಷತ್ ವತಿಯಿಂದ ಕೃಷ್ಣಮಠದ ರಾಜಾಂಗಣದಲ್ಲಿ ಅ.24ರಿಂದ (ಇಂದು) 3 ದಿನಗಳ ಕಾಲ ನಡೆಯುವ 51ನೇ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನವನ್ನು ಯೋಗಗುರು ಬಾಬಾ ರಾಮ್ ದೇವ್ ಬೆಳಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನಡೆಯುವ ಬೃಹತ್ ಪುಸ್ತಕ ಪ್ರದರ್ಶನವನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ.

ಭಾರತೀಯ ಜ್ಞಾನ ಪರಂಪರೆಯ ಬಗ್ಗೆ ಚಿಂತನಮಂಥನ ನಡೆಯುವ ಈ ಸಮ್ಮೇಳನದಲ್ಲಿ ದೇಶದ 16ಕ್ಕೂ ಹೆಚ್ಚು ಸಂಸ್ಕೃತ ವಿವಿಗಳ ಕುಲಪತಿಗಳು, ಪ್ರಾಚಾರ್ಯರು, ಪ್ರಾಧ್ಯಾಪಕರು ಮತ್ತು ದೇಶದಾದ್ಯಂತದಿಂದ ಬಂದಿರುವ ಸುಮಾರು 200 ಮಂದಿ ಭಾಗವಹಿಸಲಿದ್ದಾರೆ.

ಪರ್ಯಾಯ ಪುತ್ತಿಗೆ ಮಠ ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿವಿಗಳ ಸಹಯೋಗದಲ್ಲಿ ನಡೆಯುವ ಈ ಸಮ್ಮೇಳನದ ಉದ್ಘಾಟನೆಗೆ ಮೊದಲು ಬೆಳಗ್ಗೆ 9 ಗಂಟೆಗೆ ವಿವಿಧ ಮಠಾಧೀಶರು ಭಾಗವಹಿಸುವ ಶೋಭಾಯಾತ್ರೆ ನಡೆಯಲಿದೆ.

Vijayaprabha Mobile App free

ಮೊದಲ ದಿನ ಭಗವದ್ಗೀತೆಯ ಬಗ್ಗೆ, ಶುಕ್ರವಾರ ಭಾರತೀಯ ಭಾಷೆಗಳ ಬಗ್ಗೆ, 26ರಂದು ಭಾರತೀಯ ಜ್ಞಾನ ಪರಂಪರೆಯ ಬಗ್ಗೆ 20ಕ್ಕೂ ಹೆಚ್ಚು ಗೋಷ್ಠಿಗಳು ನಡೆಯಲಿದ್ದು, 300 ಮಂದಿ ವಿವಿಧ ವಿದ್ವಾಂಸರು ಭಾಗವಹಿಸಲಿದ್ದಾರೆ. ಗೋಷ್ಠಿಗಳಿಗೆ ರಾಜಾಂಗಣ, ಗೀತಾಮಂದಿರ, ಸಂಸ್ಕೃತ ಕಾಲೇಜು, ರಾಘವೇಂದ್ರ ಮಠಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಪ್ರತಿದಿನ ಬೆಳಗ್ಗೆ 6ರಿಂದ 7ರವರೆಗೆ ಬಾಬಾ ರಾಮ್ ದೇವ್ ಅವರು ರಾಜಾಂಗಣದಲ್ಲಿ ಯೋಗ ಧ್ಯಾನ ತರಗತಿಗಳನ್ನೂ ನಡೆಸಲಿದ್ದಾರೆ.

ಬುಧವಾರ ಬಾಬಾ ಆಗಮನ:

ಪ್ರಾಚ್ಯ ವಿದ್ಯಾ ಸಮ್ಮೇಳನದ ಉದ್ಘಾಟನೆಗೆ ಆಗಮಿಸಿದ ಬುಧವಾರ ರಾತ್ರಿಯೇ ಯೋಗಗುರು ಬಾಬಾ ರಾಮದೇವ್ ಅವರ ಜತೆಗೆ ಮತ್ತಿತರ ಗಣ್ಯರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪರ್ಯಾಯ ಮಠದ ವತಿಯಿಂದ ಭವ್ಯವಾಗಿ ಸ್ವಾಗತಿಸಲಾಯಿತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.