ಲಿವ್‌ ಇನ್‌ ರಿಲೇಶನ್ ಗೆಳತಿ ಹಾಕಿದ್ದ ರೇಪ್‌ ಕೇಸ್‌ ರದ್ದು: 22 ವರ್ಷ ಜತೆಗಿದ್ದವಳಿಂದ ದೂರು 

ಬೆಂಗಳೂರು: ಬರೋಬ್ಬರಿ 22 ವರ್ಷ ಸಹಜೀವನ ನಡೆಸಿದ ನಂತರ ಪ್ರಿಯತಮನ ವಿರುದ್ಧ ಮಹಿಳೆಯೊಬ್ಬಳು ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ. ಅತ್ಯಾಚಾರ, ಜೀವ ಬೆದರಿಕೆ ಮತ್ತು ವಂಚನೆ ಸೇರಿ ಇನ್ನಿತರ ಆರೋಪಗಳ ಸಂಬಂಧ…

ಬೆಂಗಳೂರು: ಬರೋಬ್ಬರಿ 22 ವರ್ಷ ಸಹಜೀವನ ನಡೆಸಿದ ನಂತರ ಪ್ರಿಯತಮನ ವಿರುದ್ಧ ಮಹಿಳೆಯೊಬ್ಬಳು ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ಅತ್ಯಾಚಾರ, ಜೀವ ಬೆದರಿಕೆ ಮತ್ತು ವಂಚನೆ ಸೇರಿ ಇನ್ನಿತರ ಆರೋಪಗಳ ಸಂಬಂಧ ತನ್ನ ವಿರುದ್ಧ ಮಾಜಿ ಗೆಳತಿಯು ಬ್ಯಾಡರಹಳ್ಳಿ ಪೊಲೀಸ್‌ ಠಾಣೆಗೆ ದಾಖಲಿಸಿರುವ ದೂರು ರದ್ದುಪಡಿಸುವಂತೆ ಕೋರಿ ನೆಲಮಂಗಲದ ನಿವಾಸಿ ಸತೀಶ್‌ ಎಂಬಾತ ಸಲ್ಲಿಸಿರುವ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ನಗರದ ಅಂದ್ರಹಳ್ಳಿಯಲ್ಲಿ ನೆಲೆಸಿರುವ ಗಂಗಾವತಿ ಎಂಬಾಕೆಗೆ ಸತೀಶ್‌ ಜೊತೆಗೆ ಸಲುಗೆ ಬೆಳೆದಿತ್ತು. ಅದಾಗಲೇ ಆಕೆಗೆ ಮದುವೆಯಾಗಿದ್ದರೂ, ಗಂಗಾವತಿಯನ್ನು ಮದುವೆಯಾಗಿ ಉತ್ತಮ ಜೀವನ ನೀಡುವುದಾಗಿ ಸತೀಶ್‌ ಸಹ ಭರವಸೆ ಸಹ ನೀಡಿದ್ದ. ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿ, ಬಳಿಕ, ಬೇರೆ ಮದುವೆಯಾಗಿದ್ದ. ಈ ಬಗ್ಗೆ ಗಂಗಾವತಿ ದೂರು ನೀಡಿದ್ದರು. ತನಿಖೆ ನಡೆಸಿದ್ದ ಬ್ಯಾಡರಹಳ್ಳಿ ಠಾಣಾ ಪೊಲೀಸರು, ಸತೀಶ್‌ ವಿರುದ್ಧ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದರಿಂದ ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಸತೀಶ್‌ ಹೈಕೋರ್ಟ್‌ ಮೊರೆ ಹೋಗಿದ್ದರು.

ಮೊದಲಿಗೆ ಮಲ್ಲಯ್ಯ ಎಂಬುವವರನ್ನು ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಜನಿಸಿದ್ದರು. ಮಾರಣಾಂತಿಕ ರೋಗದಿಂದ ಪತಿ ಬಳಲುತ್ತಿದ್ದ ಹಿನ್ನೆಲೆಯಲ್ಲಿ 2004ರಲ್ಲಿ ಬೆಂಗಳೂರಿಗೆ ಬಂದಿದ್ದ ಗಂಗಾವತಿ ಹೋಟೆಲ್‌ ಕೆಲಸಕ್ಕೆ ಸೇರಿದ್ದರು.

Vijayaprabha Mobile App free

ಈ ವೇಳೆ ಪರಿಚಯವಾದ ಸತೀಶ್‌ ಜೊತೆಗೆ ಸಲುಗೆ ಬೆಳೆದಿತ್ತು. ಗಂಗಾವತಿಯನ್ನು ಮದುವೆಯಾಗಿ ಉತ್ತಮ ಜೀವನ ನೀಡುವುದಾಗಿ ಸತೀಶ್‌ ಸಹ ಭರವಸೆ ಸಹ ನೀಡಿದ್ದ. ಇದರಿಂದ ಸತೀಶ್‌ ಮನೆಯಲ್ಲಿಯೇ ಆಕೆ ವಾಸ ಮಾಡತೊಡಗಿದ್ದು, ಇಬ್ಬರ ನಡುವೆ ದೈಹಿಕ ಸಂಬಂಧ ಬೆಳೆದಿತ್ತು.

ನಂತರ ಸತೀಶ್‌ ತನ್ನ ಹುಟ್ಟೂರಿಗೆ ಹೋಗಿ ಹಿರಿಯರು ನಿಶ್ವಯಿಸಿದ್ದ ಹುಡುಗಿಯನ್ನು ವಿವಾಹವಾಗಿದ್ದರು. ಈ ವಿಚಾರ ತಿಳಿದ ಗಂಗಾವತಿ ತನ್ನನ್ನು ಮದುವೆಯಾಗುವಂತೆ ಸತೀಶ್‌ ಅವರನ್ನು ಬಲವಂತ ಮಾಡಿದ್ದರು. ಅದಕ್ಕೆ ನಿರಾಕರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ಮಾಡಿದ ಆರೋಪ ಸತೀಶ್‌ ಮೇಲಿತ್ತು. ಪರಿಣಾಮ ಸತೀಶ್‌ ವಿರುದ್ಧ ಗಂಗಾವತಿಯು ಅತ್ಯಾಚಾರ, ವಂಚನೆ, ಜೀವ ಬೆದರಿಕೆ, ಉದ್ದೇಶಪೂರ್ವಕವಾಗಿ ಅವಮಾನ ಮಾಡಿರುವುದು ಸೇರಿದಂತೆ ಇನ್ನಿತರ ಆರೋಪ ಹೊರಿಸಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಬ್ಯಾಡರಹಳ್ಳಿ ಠಾಣಾ ಪೊಲೀಸರು, ಸತೀಶ್‌ ವಿರುದ್ಧ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದರಿಂದ ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಸತೀಶ್‌ ಹೈಕೋರ್ಟ್‌ ಮೊರೆ ಹೋಗಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.