ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣೆಗೆ ಮಾಡುವ ಕಾರ್ಯಕ್ರಮಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.
ಹೌದು, ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಮಾಡುವುದಕ್ಕಾಗಿ ಉನ್ನತ ಶಿಕ್ಷಣದಿಂದ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡುವ ಯೋಜನೆ ಇದಾಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅವರಿಂದ ಟ್ಯಾಬ್ ವಿತರಣೆ ಮಾಡಲು ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.