ಗಮನಿಸಿ: ನಿಮ್ಮ ಖಾತೆಗೂ ಬರುತ್ತೆ ₹2000…!

ಬೆಂಗಳೂರು: ಕರೋನ 2ನೇ ಅಲೆಯ ಹಿನ್ನಲೆ, ಇದರ ಕಡಿವಾಣಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದು, ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಕ್ಷೌರಿಕರು, ಅಗಸರು, ಹಮಾಲರು, ಗೃಹಕಾರ್ಮಿಕರು, ಚಿಂದಿ…

money vijayaprabha news

ಬೆಂಗಳೂರು: ಕರೋನ 2ನೇ ಅಲೆಯ ಹಿನ್ನಲೆ, ಇದರ ಕಡಿವಾಣಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದು, ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳನ್ನು ಬಂದ್ ಮಾಡಲಾಗಿದೆ.

ಇದರಿಂದ ಕ್ಷೌರಿಕರು, ಅಗಸರು, ಹಮಾಲರು, ಗೃಹಕಾರ್ಮಿಕರು, ಚಿಂದಿ ಆಯುವವರು, ಟೈಲರ್, ಮೆಕ್ಯಾನಿಕ್, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಸೇರಿದಂತೆ ಅನೇಕ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಇನ್ನು, ಕೊರೋನಾ ಸೋಂಕಿನ ಎರಡನೇ ಅಲೆ ಹಿನ್ನೆಲೆ, 11 ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಒಂದು ಬಾರಿ ಪರಿಹಾರದ ಸಹಾಯಧನ ನೀಡಲು ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಲಾಗಿದೆ. ಕ್ಷೌರಿಕರು, ಅಗಸರು, ಹಮಾಲರು, ಗೃಹಕಾರ್ಮಿಕರು, ಚಿಂದಿ ಆಯುವವರು, ಟೈಲರ್, ಮೆಕ್ಯಾನಿಕ್, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು & ಭಟ್ಟಿ ಕಾರ್ಮಿಕರಿಗೆ ಸರ್ಕಾರ ₹2000 ಸಹಾಯಧನ ನೀಡುತ್ತಿದ್ದು, ಅರ್ಜಿ ಸಲ್ಲಿಸಲು ಸೇವಾಸಿಂದು ಪೋರ್ಟಲ್ sevasindhu.karnataka.gov.inಗೆ ಸಂಪರ್ಕಿಸಬಹುದು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.