ಬೆಂಗಳೂರು: ಕರೋನ ಎರಡನೇ ಅಲೆ ಹಿನ್ನಲೆ, ಲಾಕ್ಡೌನ್ನಿಂದ ತೀವ್ರ ಸಮಸ್ಯೆಗೆ ಸಿಲುಕಿದ ಅನುದಾನರಹಿತ ಶಾಲಾ ಶಿಕ್ಷಕರು & ಬೋಧಕೇತರ ಸಿಬ್ಬಂದಿಗೆ ತಲಾ ₹5,000 ನೀಡಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ.
ಈ ಬಗ್ಗೆ ರಾಜ್ಯ ಸರ್ಕಾದಿಂದ ಆದೇಶ ಹೊರಡಿಸಲಾಗಿದ್ದು, ಪರಿಹಾರದ ಹಣವನ್ನು ಅರ್ಹರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಅದಕ್ಕೂ ಮುನ್ನ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ಅನ್ನು ಫಲಾನುಭವಿಗಳು ಲಿಂಕ್ ಮಾಡಬೇಕಾಗಿದೆ.
ರಾಜ್ಯದಲ್ಲಿ ಅನುದಾನರಹಿತ ಶಾಲೆಗಳಲ್ಲಿ 1,72,945 ಶಿಕ್ಷಕರು & 34,000 ಬೋಧಕೇತರ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದು, ಸರ್ಕಾರದ ಈ ನಿರ್ಧಾರದಿಂದ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಅನುಕೂಲವಾಗಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.