ಚಿತ್ರದುರ್ಗ: ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಭೂ ಸಿರಿ ಯೋಜನೆ ಜಾರಿಗೆ ತರಲಾಗುತ್ತಿದ್ದು, ಬಿತ್ತನೆ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂತೆ ರೂ.10000/- ಗಳನ್ನು ರೈತರ ಖಾತೆ ಜಮೆ ಮಾಡಲಾಗುವುದು. ಬಿತ್ತನೆ ಬೀಜ, ಗೊಬ್ಬರ ಖರೀದಿಗಾಗಿ ರೈತರು ಸಾಲ ಮಾಡದಂತೆ ತಡೆಯುಲು ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಈ ಕುರಿತು ಚಿತ್ರದುರ್ಗದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಭೂ ಸಿರಿ ಯೋಜನೆ ಜಾರಿಗೆ ತರಲಾಗುತ್ತಿದ್ದು, ರೈತರಿಗೆ ಅನುಕೂಲವಾಗುವಂತೆ ರೂ.10000/- ಗಳನ್ನು ರೈತರ ಖಾತೆ ಜಮೆ ಮಾಡಲಾಗುವುದು ಎಂದು ಹೇಳಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.