ಭೀಕರ ಅಪಘಾತ: ಸಂಕ್ರಾಂತಿ ಪ್ರಯುಕ್ತ ದಾವಣಗೆರೆಯಿಂದ ಗೋವಾಕ್ಕೆ ತೆರಳುತ್ತಿದ್ದ 13 ಜನರ ದುರ್ಮರಣ; ಉಳಿದವರ ಸ್ಥಿತಿ ಗಂಭೀರ

accident from davanagere to Goa vijayaprabha accident from davanagere to Goa vijayaprabha

ಧಾರವಾಡ: ಸಂಕ್ರಾಂತಿ ಹಬ್ಬದ ಪ್ರಯುಕ್ತ ದಾವಣಗೆರೆಯಿಂದ ಗೋವಾಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ 10 ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಒಟ್ಟು 13 ಜನ ಸಾವನ್ನಪ್ಪಿರುವ ಘಟನೆ ಧಾರವಾಡದ ಜಿಲ್ಲೆಯ ಹೊರವಲಯದ ಇಟ್ಟಿಗಟ್ಟಿ ಬೈಪಾಸ್ ಬಳಿ ನಡೆದಿದೆ.

ದಾವಣಗೆರೆಯ ಲೇಡಿಸ್ ಕ್ಲಬ್ ನ ವತಿಯಿಂದ ಒಟ್ಟು 13 ಜನ ಮಹಿಳೆಯರು ಸಂಕ್ರಮಣ ಹಬ್ಬದ ಪ್ರಯುಕ್ತ ಗೋವಾಕ್ಕೆ ಹೊರಟಿದ್ದು, ಧಾರವಾಡದ ಜಿಲ್ಲೆಯ ಹೊರವಲಯದ ಇಟ್ಟಿಗಟ್ಟಿ ಬೈಪಾಸ್ ಬಳಿ ಬೆಳಗ್ಗೆ 3.30 ರ ಸುಮಾರಿಗೆ ಎದುರಿನಿಂದ ಬಂದ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಡಾ .ವೀಣಾ ಪ್ರಕಾಶ್, ರಾಜೇಶ್ವರಿ, ಮಂಜುಳಾ ಎಂಬುವರು ಹಾಗು ಟಿಪ್ಪರ್ ಚಾಲಕ ಸೇರಿದಂತೆ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದು, ಒಟ್ಟು 13 ಜನ ಸಾವನ್ನಪ್ಪಿದ್ದಾರೇ ಎನ್ನಲಾಗಿದ್ದು, ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ಧಾಖಲಿಸಲಾಗಿದೆ.

ಈ ಭೀಕರ ಘಟನೆಯಿಂದ ಟಿಪ್ಪರ್ ಮತ್ತು ಟೆಂಪೂ ಟ್ರಾವೆಲರ್ ಸಂಪೂರ್ಣ ನುಜ್ಜುನುಜ್ಜಾಗಿದ್ದು, ಘಟನೆಯಲ್ಲಿ ಒಳಗೆ ಸಿಲಿಕಿದ್ದ ಮುತದೇಹಗಳನ್ನು  ಪೋಲಿಸಲು ಮತ್ತು ಸ್ಥಳೀಯರು ಹೊರ ತೆಗೆದಿದ್ದಾರೆ.

Advertisement

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement