ATM robbery case : ಎಸ್.ಬಿ.ಐ ಬ್ಯಾಂಕ್ ಎಟಿಎಂ ದರೋಡೆ ದಾಳಿಯಲ್ಲಿ ಕೊಲೆಯಾದ ಭದ್ರತಾ ಸಿಬ್ಬಂದಿ ಗಿರಿ ವೆಂಕಟೇಶ್ ಅವರ ಬೇಮಳಖೇಡ್ ಮನೆಗೆ ಸಚಿವ ಈಶ್ವರ್ ಖಂಡ್ರೆ (Ishwar Khandre) ಭೇಟಿ ನೀಡಿದ್ದು, ಒಟ್ಟು 18 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಹೌದು, ಈ ಕುರಿತು ತಮ್ಮ X ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿವ ಈಶ್ವರ್ ಖಂಡ್ರೆ, ಮೃತರ ಕುಟುಂಬಕ್ಕೆ ಸರ್ಕಾರದಿಂದ ಸಮಗ್ರ ಪರಿಹಾರ ಒದಗಿಸಲು ಬದ್ಧವಾಗಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ₹8 ಲಕ್ಷ ಪರಿಹಾರ ಮತ್ತು ಹೆಚ್ಚುವರಿಯಾಗಿ ₹10 ಲಕ್ಷ, ಪಿಂಚಣಿ ಹಾಗೂ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: LIC Bima Sakhi Yojana | ಮಾಸಿಕ ₹7,000 ಗಳಿಸಬಹುದಾದ ‘ಬಿಮಾ ಸಖಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್; ಅರ್ಜಿ ಸಲ್ಲಿಕೆ ಹೇಗೆ?
ATM robbery case : ಮೃತ ಸಿಬ್ಬಂದಿ ಕುಟುಂಬಕ್ಕೆ 18 ಲಕ್ಷ ರೂ. ಪರಿಹಾರ
ಇನ್ನು, ಬೀದರ್ನಲ್ಲಿ ಹಾಡಹಗಲೇ ಆಗಂತುಕರು ನಡೆಸಿದ ಗುಂಡಿನ ದಾಳಿಯಲ್ಲಿ ಬ್ಯಾಂಕ್ ಸಿಬ್ಬಂದಿ ಗಿರಿ ವೆಂಕಟೇಶ್ ಸಾವನ್ನಪ್ಪಿದ್ದರು. ನಂತರ 83 ಲಕ್ಷ ರೂ. ಹಣ ದೋಚಿ ಪರಾರಿಯಾಗಿದ್ದರು. ಇದೀಗ ಸರ್ಕಾರ ಇವರ ಕುಟುಂಬದ ನೆರವಿಗೆ ಧಾವಿಸಿದೆ. ಮೃತ ಸಿಬ್ಬಂದಿಯ ಕುಟುಂಬಕ್ಕೆ ವಿಶೇಷ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಈ ಬೆನ್ನಲ್ಲೇ ಸಮಾಜಕಲ್ಯಾಣ ಇಲಾಖೆ ಸಹ ಪ್ರತ್ಯೇಕವಾಗಿ 8 ಲಕ್ಷ ರೂ. ಪರಿಹಾರ ಪ್ರಕಟಿಸಿದೆ.
ಎಸ.ಬಿ.ಐ ಬ್ಯಾಂಕ್ ಎಟಿಎಂ ದರೋಡೆ ದಾಳಿಯಲ್ಲಿ ಹತ್ಯೆಗೀಡಾದ ಭದ್ರತಾ ಸಿಬ್ಬಂದಿ ಗಿರಿ ವೆಂಕಟೇಶ್ ಅವರ ಬೇಮಳಖೇಡ್ ಮನೆಗೆ ಇಂದು ಭೇಟಿ ನೀಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ಈ ದುರಂತದಿಂದ ತೀವ್ರ ದುಃಖ ವ್ಯಕ್ತಪಡಿಸುತ್ತಾ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದೆ.
ಮೃತರ ಕುಟುಂಬಕ್ಕೆ ಸರ್ಕಾರದಿಂದ ಸಮಗ್ರ ಪರಿಹಾರ ಒದಗಿಸಲು… pic.twitter.com/iqRg3arpAL
— Eshwar Khandre (@eshwar_khandre) January 17, 2025