ತುಮಕೂರಿನ ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, PMNRF ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಇನ್ನು, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಅನೇಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಈ ಭೀಕರ ಅಪಘಾತದಲ್ಲಿ 9 ಮಂದಿ ದಾರುಣ ಅಂತ್ಯ ಕಂಡಿದ್ದು, ಲಾರಿ ಓವರ್ಟೇಕ್ ಮಾಡುವ ವೇಳೆ ಕ್ರೂಸರ್ ಅಪಘಾತಕ್ಕೀಡಾಗಿದೆ. ಕ್ರೂಸರ್ನಲ್ಲಿ 20 ಮಂದಿ ಪ್ರಯಾಣಿಸುತ್ತಿದ್ದು, ಎಲ್ಲರೂ ರಾಯಚೂರು ಮೂಲದವರು ಎನ್ನಲಾಗಿದೆ.
ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ.ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು.ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ.ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು: PM
— PMO India (@PMOIndia) August 25, 2022