ಹುಬ್ಬಳ್ಳಿ: ವೈದ್ಯರ ನಿರ್ಲಕ್ಷ್ಯಕ್ಕೆ ಎರಡು ವರ್ಷದ ಮಗು ಬಲಿಯಾಗಿದೆ ಎಂದು ಆರೋಪಿಸಿ ಮಗುವಿನ ಪಾಲಕರು, ಕುಟುಂಬಸ್ಥರು ಹುಬ್ಬಳ್ಳಿ ಕಿಮ್ಸ್ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಹೌದು, ಹುಬ್ಬಳ್ಳಿಯ ತಾಜ್ ನಗರದ 2 ವರ್ಷದ ರಕ್ಷಾ ಚೌಧರಿ ಮೃತ ದುರ್ದೈವಿಯಾಗಿದ್ದು, ಮಗುವಿನ ಬಾಯಿಯೊಳಗೆ ಸಣ್ಣ ಗಡ್ಡೆಯಾಗಿತ್ತು. ಚಿಕಿತ್ಸೆಗೆಂದು ಪಾಲಕರು ಮಗುವನ್ನು ಕಿಮ್ಸ್ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದು, ಪಾಲಕರ ಅನುಮತಿ ಪಡೆಯದೇ ವೈದ್ಯರು ಆಪರೇಷನ್ ಮಾಡಿದ್ದಾರೆ.
ಅಪರೇಷನ್ ಬಳಿಕ ಮಗುವಿಗೆ ತೀವ್ರ ರಕ್ತಸ್ರಾವವಾಗಿದ್ದು, ರಕ್ತಸ್ರಾವ ನಿಲ್ಲದ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದರು. ಅಲ್ಲಿಯೂ ರಕ್ತಸ್ರಾವ ನಿಲ್ಲದ ಹಿನ್ನೆಲೆ ವಾಪಸ್ ಕಿಮ್ಸ್ಗೆ ಕಳುಹಿಸಿದ್ದರು. ಕಿಮ್ಸ್ಗೆ ಆಸ್ಪತ್ರೆಗೆ ವಾಪಸ್ ಬಂದ ಮೇಲೆ ಮಗು ಸಾವನ್ನಪ್ಪಿದೆ ಎಂದು ಪಾಲಕರು ಆರೋಪಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.