ಮಾಸ್ಕ್ ಧರಿಸದಿದ್ದರೆ 2000 ರೂ ದಂಡ: ಕೇಜ್ರಿವಾಲ್ ಸಂಚಲನ ನಿರ್ಣಯ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರೋನಾ ವೈರಸ್ ಸಾಂಕ್ರಾಮಿಕ ರೋಗ ಹೆಚ್ಚುತ್ತಿದೆ. ಬುಧವಾರ 7,400 ಕ್ಕೂ ಹೆಚ್ಚು ಕರೋನ ಪ್ರಕರಣಗಳು ವರದಿಯಾಗಿದ್ದು, 131 ಸಾವುಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ದೆಹಲಿಯ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ…

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರೋನಾ ವೈರಸ್ ಸಾಂಕ್ರಾಮಿಕ ರೋಗ ಹೆಚ್ಚುತ್ತಿದೆ. ಬುಧವಾರ 7,400 ಕ್ಕೂ ಹೆಚ್ಚು ಕರೋನ ಪ್ರಕರಣಗಳು ವರದಿಯಾಗಿದ್ದು, 131 ಸಾವುಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ದೆಹಲಿಯ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸರ್ವಪಕ್ಷ ಸಭೆ ನಡೆಸಲಾಯಿತು.

ಸಭೆಯ ನಂತರ, ಜನರು ಹೆಚ್ಚು ಜಾಗರೂಕರಾಗಿರಬೇಕು ಮತ್ತು ಮನೆಯಲ್ಲಿ ಹಬ್ಬಗಳು ಮತ್ತು ಆಚರಣೆಗಳನ್ನು ಆಯೋಜಿಸಬೇಕು ಎಂದು ಕೇಜ್ರಿವಾಲ್ ಹೇಳಿದರು. ಮುಂಬರುವ ಚಾಟ್ ಪೂಜೆಯನ್ನು ಯಾವುದೇ ಸಂಭ್ರಮವಿಲ್ಲದೆ ಮನೆಯಲ್ಲಿ ಆಚರಿಸಬೇಕು ಎಂದು ಕೇಜ್ರಿವಾಲ್ ಹೇಳಿದರು.

ಒಂದು ವೇಳೆ 200 ಕ್ಕೂ ಹೆಚ್ಚು ಜನರು ಒಂದೇ ಸ್ಥಳದಲ್ಲಿ ಆಚರಿಸಿದರೆ, ಒಬ್ಬರಿಗೆ ಕರೋನ ಸೋಂಕು ಇದ್ದರೆ, ಎಲ್ಲರೂ ಕರೋನಾ ವೈರಸ್ ಸೋಂಕು ತಗುಲುವ ಸಾಧ್ಯತೆ ಇದೆ ಎಂದು ಕೇಜ್ರಿವಾಲ್ ಹೇಳಿದರು. ಆದ್ದರಿಂದ ಆಚರಣೆಗಳು ರದ್ದು ಮಾಡುವುದಿಲ್ಲ. ಆದರೆ ಭಾರಿ ಜನಸಂದಣಿ ಗುಂಪುಗೂಡುವುದನ್ನು ನಿಷೇದಿಸುತ್ತೇವೆ. ಆದ್ದರಿಂದ ಮನೆಯಲ್ಲೇ ಆಚರಣೆ ಮಾಡಬೇಕು ಎಂದು ಕೇಜ್ರಿವಾಲ್ ಹೇಳಿದರು.

Vijayaprabha Mobile App free

ದೆಹಲಿಯಲ್ಲಿ, ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿದರೆ, ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಮಾಸ್ಕ್ ಧರಿಸದಿದ್ದರೆ 2 ಸಾವಿರ ರೂ.ಗಳ ದಂಡ ವಿಧಿಸಲಾಗುವುದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಪ್ರಸ್ತುತ ದೆಹಲಿಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 5 ಲಕ್ಷ ದಾಟಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.