ಛತ್ತೀಸ್ಗಢ: ತಲೆಗೆ 11 ಲಕ್ಷ ರೂಪಾಯಿ ಬಹುಮಾನ ಹೊಂದಿದ್ದ 6 ಮಂದಿ ಸೇರಿದಂತೆ 22 ನಕ್ಸಲೀಯರು ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವರಲ್ಲಿ ಐವರ ತಲೆಯ ಮೇಲೆ 2 ಲಕ್ಷ ರೂಪಾಯಿ ಬಹುಮಾನವಿದ್ದರೆ, ಒಬ್ಬನ ತಲೆಯ ಮೇಲೆ 1 ಲಕ್ಷ ರೂಪಾಯಿ ಬಹುಮಾನವಿತ್ತು. ಈ ವರ್ಷ ಇಲ್ಲಿಯವರೆಗೆ, 107 ನಕ್ಸಲೀಯರು ಶರಣಾಗಿದ್ದಾರೆ ಮತ್ತು 82 ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಬಿಜಾಪುರದಲ್ಲಿ 143 ನಕ್ಸಲರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಶರಣಾದ ನಕ್ಸಲೀಯರು ಅಮಾನವೀಯ ಮತ್ತು ಪೊಳ್ಳು ನಕ್ಸಲ್ ಸಿದ್ಧಾಂತವನ್ನು ಖಂಡಿಸಿದರು ಮತ್ತು ರಾಜ್ಯ ಸರ್ಕಾರದ ನಕ್ಸಲ್ ವಿರೋಧಿ ನೀತಿ ಮತ್ತು ಪೊಲೀಸರ ಪುನರ್ವಸತಿ ಅಭಿಯಾನವನ್ನು ಶ್ಲಾಘಿಸಿದರು. “ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯ ಪ್ರಕಾರ ಅವರು ಪ್ರಯೋಜನಗಳನ್ನು ಪಡೆಯುತ್ತಾರೆ” ಎಂದು ಅವರು ಹೇಳಿದರು.