ರಾಜ್ಯದಲ್ಲಿ 264 ನೂತನ ಕೊರೋನಾ ಕೇಸ್; ಬಳ್ಳಾರಿ, ದಾವಣಗೆರೆ ಸೇರಿದಂತೆ 10 ಜಿಲ್ಲೆಗಳಲ್ಲಿ ‘ಶೂನ್ಯ’ ಪ್ರಕರಣ!

coronavirus-update coronavirus-update

ಬೆಂಗಳೂರು: ರಾಜ್ಯದಲ್ಲಿ ಇಂದು 264 ನೂತನ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಸಾವನ್ನಪ್ಪಿದ್ದು, ಈ ಸಂಬಂಧ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, ಈವರೆಗೆ ಪತ್ತೆಯಾದ ಕೊರೋನಾ ಪ್ರಕರಣಗಳ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದ್ದು, ಈ ಪೈಕಿ 29,35,659 ಮಂದಿ ಚೇತರಿಸಿಕೊಂಡಿದ್ದಾರೆ.

ಇನ್ನು, ಕರೋನ ಸೋಂಕಿಗೆ ರಾಜ್ಯದಲ್ಲಿ ಇಲ್ಲಿಯವರೆಗೆ 37,937 ಮಂದಿ ಕೊನೆಯುಸಿರೆಳೆದಿದ್ದು, ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 9,508 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ಇಂದೇ 264 ಕೇಸ್: ಯಾವ ಜಿಲ್ಲೆಯಲ್ಲಿ, ಎಷ್ಟು?

Advertisement

ಬಳ್ಳಾರಿ, ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ೧೦ ಜಿಲ್ಲೆಗಳಲ್ಲಿ ಯಾವುದೇ ಕರೋನ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕರೋನ ಸೋಂಕಿತ ಪ್ರಕರಣ ಪಟ್ಟಿ ಈ ರೀತಿ ಇದೆ.

ಬೆಂಗಳೂರು ಗ್ರಾಮಾಂತರ-5, ಬೆಂಗಳೂರು ನಗರ-121, ಬೀದರ್-0, ಚಾಮರಾಜನಗರ-1, ದಕ್ಷಿಣ ಕನ್ನಡ-34, ಚಿಕ್ಕಬಳ್ಳಾಪುರ-1, ಚಿಕ್ಕಮಗಳೂರು-9, ಬಾಗಲಕೋಟೆ-0, ಬಳ್ಳಾರಿ-0, ಬೆಳಗಾವಿ-0, ಚಿತ್ರದುರ್ಗ-0, ದಾವಣಗೆರೆ-0, ಧಾರವಾಡ-0, ಗದಗ-0, ಹಾಸನ-16, ಹಾವೇರಿ-1, ಕಲಬುರಗಿ-1, ಕೊಡಗು-12, ಕೋಲಾರ-7, ಕೊಪ್ಪಳ-0, ಮಂಡ್ಯ-7, ಮೈಸೂರು-21, ರಾಯಚೂರು-1, ರಾಮನಗರ-2, ಶಿವಮೊಗ್ಗ-5, ತುಮಕೂರು-6, ಉಡುಪಿ-10, ಉ.ಕನ್ನಡ-3, ವಿಜಯಪುರ-0, ಯಾದಗಿರಿ-1.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement