GOOD NEWS: ರೈತರಿಗೆ ಸಿಗಲಿದೆ ₹30 ಸಾವಿರದವರೆಗೆ ಪರಿಹಾರ; ಪರಿಹಾರ ಧನ ಹೀಗೆ ಪಡೆಯಿರಿ

ಬೆಂಗಳೂರು: ಚರ್ಮಗಂಟು ರೋಗದಿಂದ ಸಾವನ್ನಪ್ಪುವ ಜಾನುವಾರುಗಳಿಗೆ ಪರಿಹಾರವಾಗಿ ಹಸುವಿಗೆ ₹20 ಸಾವಿರ, ಎತ್ತುಗಳಿಗೆ ₹30 ಸಾವಿರ ಹಾಗೂ ಪ್ರತಿ ಕರುವಿಗೆ ₹5 ಸಾವಿರ ನೀಡಲಾಗುವುದು’ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ…

cattle

ಬೆಂಗಳೂರು: ಚರ್ಮಗಂಟು ರೋಗದಿಂದ ಸಾವನ್ನಪ್ಪುವ ಜಾನುವಾರುಗಳಿಗೆ ಪರಿಹಾರವಾಗಿ ಹಸುವಿಗೆ ₹20 ಸಾವಿರ, ಎತ್ತುಗಳಿಗೆ ₹30 ಸಾವಿರ ಹಾಗೂ ಪ್ರತಿ ಕರುವಿಗೆ ₹5 ಸಾವಿರ ನೀಡಲಾಗುವುದು’ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್, ‘ಚರ್ಮಗಂಟು ರೋಗದಿಂದ ಜಾನುವಾರುಗಳ ಸಾವು ಪ್ರಕರಣದಲ್ಲಿ ಮಾಲೀಕರಿಗೆ ಪರಿಹಾರ ನೀಡಲು ₹2 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಈ ರೋಗವನ್ನು ಹತೋಟಿಗೆ ತರಲಾಗುತ್ತಿದೆ’ ಎಂದಿದ್ದಾರೆ.

ಚರ್ಮಗಂಟು ರೋಗ: ಪರಿಹಾರ ಧನ ಹೀಗೆ ಪಡೆಯಿರಿ

Vijayaprabha Mobile App free

ಜಾನುವಾರುಗಳು ಚರ್ಮಗಂಟು ರೋಗದಿಂದ ಸಾವನಪ್ಪಿದ್ದರೆ ಪರಿಹಾರ ಧನವನ್ನು ಜಾನುವಾರು ಮಾಲೀಕರ ಆಧಾರ್ ಸಂಖ್ಯೆ ಜೋಡಿಸಲ್ಪಟ್ಟಿರುವ ಬ್ಯಾಂಕ್ ಖಾತೆಗೆ RTGS/NEFT ಮುಖಾಂತರ ನೇರವಾಗಿ ಪಾವತಿಸಲಾಗುತ್ತದೆ.

ಚರ್ಮಗಂಟು ರೋಗದಿಂದ ಮರಣ ಹೊಂದಿದ ಜಾನುವಾರುವಿನ ಸೂಕ್ತ ಛಾಯಚಿತ್ರಗಳು & ಯುಐಡಿ ಇಯರ್ ಟ್ಯಾಗ್ ಇರಬೇಕು. ಆದರೆ ಮಾಲೀಕರಿಗೆ ಫೋಟೋ ಒದಗಿಸುವಂತೆ ಒತ್ತಾಯಿಸುವಂತಿಲ್ಲ ಮತ್ತು ಚರ್ಮಗಂಟು ರೋಗದಿಂದ ಮರಣ ಹೊಂದಿದ ಜಾನುವಾರು ವಿಮಾ ಸೌಲಭ್ಯ ಹೊಂದಿದಲ್ಲಿ ಮರಣ ಪರಿಹಾರ ಧನವನ್ನು ಪಾವತಿಸಲಾಗುವುದಿಲ್ಲ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.