ರಾಜ್ಯದಲ್ಲಿ ಮುಗಿಯದ ವರುಣಾರ್ಭಟ: ಇನ್ನೂ 5 ದಿನ ಭಾರೀ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!

ರಾಜ್ಯದಲ್ಲಿ ವರುಣಾರ್ಭಟ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಸೆ.9ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಮೀನುಗಾರರು…

rain-vijayaprabha-news

ರಾಜ್ಯದಲ್ಲಿ ವರುಣಾರ್ಭಟ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಸೆ.9ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದಿನ 5 ದಿನ ಹೆಚ್ಚಾಗಲಿದೆ. ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ರಾತ್ರಿ ಸುರಿದ ಮಳೆಗೆ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

ನಗರಗಳ ಹವಾಮಾನ ವರದಿ:

Vijayaprabha Mobile App free

ಬೆಂಗಳೂರು: 29-20, ಮಂಗಳೂರು: 29-24, ಶಿವಮೊಗ್ಗ: 29-21, ಬೆಳಗಾವಿ: 28-21, ಮೈಸೂರು: 31-21, ಮಂಡ್ಯ: 31-21, ಕೊಡಗು: 26-18, ರಾಮನಗರ: 31-21, ಹಾಸನ: 28-19, ಚಾಮರಾಜನಗರ: 31-21, ಚಿಕ್ಕಬಳ್ಳಾಪುರ: 29-20, ಕೋಲಾರ: 29-21, ತುಮಕೂರು: 29-21, ಉಡುಪಿ: 29-24, ಕಾರವಾರ: 29-26, ಚಿಕ್ಕಮಗಳೂರು: 26-19, ದಾವಣಗೆರೆ: 30-22, ಚಿತ್ರದುರ್ಗ: 31-21, ಹಾವೇರಿ: 30-22, ಬಳ್ಳಾರಿ: 33-23, ಗದಗ: 31-22, ಕೊಪ್ಪಳ: 32-23, ರಾಯಚೂರು: 33-24, ಯಾದಗಿರಿ: 33-24, ವಿಜಯಪುರ: 31-22, ಬೀದರ್: 29-22, ಕಲಬುರಗಿ: 32-23, ಬಾಗಲಕೋಟೆ: 32-23 ಡಿಗ್ರಿ ಸೆಲ್ಸಿಯಸ್ ಇರಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.