ರಾಯಚೂರು: ಹುಡುಗ ಕಪ್ಪು ಎಂಬ ಕಾರಣ ಹೇಳಿ ಮದುವೆ ನಿರಾಕರಿಸಿದ್ದಕ್ಕೆ ಅಣ್ಣ ಸ್ವಂತ ತಂಗಿಯನ್ನೇ ಕೊಚ್ಚಿ ಕೊಲೆಗೈದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ.
ಹೌದು, ಗಬ್ಬೂರು ಗ್ರಾಮದ ಶ್ಯಾಮಸುಂದರ ಕೊಲೆಯ ಆರೋಪಿಯಾಗಿದ್ದು, ತನ್ನ ತಂಗಿ ಚಂದ್ರಕಲಾ (22) ಕೊಲೆ ಮಾಡಿದ್ದಾನೆ. ಶ್ಯಾಮಸುಂದರ ತಂಗಿ ಚಂದ್ರಕಲಾಳಿಗೆ ನಿಶ್ಚಿತಾರ್ಥವಾಗಿ, ಜುಲೈ 13ರಂದು ಮದುವೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದ ಚಂದ್ರಕಲಾ ಕುಟುಂಬಸ್ಥರು, ಸಂಬಂಧಿಕರಿಗೆ ಲಗ್ನ ಪತ್ರಿಕೆ ಸಹ ಹಂಚಿದ್ದರು.
ಆದರೆ ಏಕಾಏಕಿ ಹುಡುಗ ಕಪ್ಪಗಿದ್ದಾನೆ ಎಂದು ಹೇಳಿ ಚಂದ್ರಕಲಾ ಮದುವೆಗೆ ನಿರಾಕರಿಸಿದ್ದು, ಈ ವಿಚಾರ ಮನೆಯವರಿಗೆ ತಿಳಿಸುತ್ತಿದ್ದಂತೆ ಮನೆಯಲ್ಲಿದ್ದ ಕೊಡಲಿಯಿಂದ ಚಂದ್ರಕಲಾಳನ್ನು ಅಣ್ಣನಾದ ಶ್ಯಾಮಸುಂದರ ಕೊಚ್ಚಿ ಕೊಲೆಗೈದಿದ್ದಾನೆ.
ಇನ್ನು, ಆರೋಪಿಯನ್ನು ಗಬ್ಬೂರು ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಈ ಸಂಬಂಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.