ಮರ್ಯಾದೆ ಹತ್ಯೆ: ಅನ್ಯ ಜಾತಿಯ ಹುಡುಗನ ಜೊತೆ‌ ಪ್ರೀತಿ; ಮಗಳನ್ನೇ ಕೊಚ್ಚಿ ಕೊಂದ ತಂದೆ

ಮೈಸೂರು: ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ತನ್ನ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಮಹದೇಶ್ವರ ದೇವಸ್ಥಾನ ಬೀದಿಯಲ್ಲಿ ನಡೆದಿದೆ. ಗಾಯತ್ರಿ (18) ಹತ್ಯೆಯಾದ ನತದೃಷ್ಟ ಯುವತಿಯಾಗಿದ್ದು, ಜಯಣ್ಣ ಕೊಲೆಗೈದ…

ಮೈಸೂರು: ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ತನ್ನ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಮಹದೇಶ್ವರ ದೇವಸ್ಥಾನ ಬೀದಿಯಲ್ಲಿ ನಡೆದಿದೆ.

ಗಾಯತ್ರಿ (18) ಹತ್ಯೆಯಾದ ನತದೃಷ್ಟ ಯುವತಿಯಾಗಿದ್ದು, ಜಯಣ್ಣ ಕೊಲೆಗೈದ ಆರೋಪಿ ತಂದೆಯಾಗಿದ್ದಾರೆ. ಮೃತ ಗಾಯತ್ರಿ ರಾಘವೇಂದ್ರ ಎಂಬ ಅನ್ಯ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದ್ದು, ಮನೆಯವರು ಎಷ್ಟು ಬುದ್ದಿವಾದ ಹೇಳಿದರೂ ಕೇಳಿರಲಿಲ್ಲ. ಅವನನ್ನೇ ಮದುವೆಯಾಗುತ್ತೇನೆ ಎಂದು ಗಾಯತ್ರಿ ಹಠ ಹಿಡಿದಿದ್ದಳು.

ಹೀಗಾಗಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ಊಟ ಕೊಡಲು ಬಂದ ಗಾಯತ್ರಿ ಮೇಲೆ ತಂದೆ ಜಯರಾಮ್ ಮಚ್ಚನಿಂದ ಕೊಚ್ಚಿ ಕೊಂದು, ನಂತರ ಪೋಲಿಸ್ ಠಾಣೆಗೆ ಹೋಗಿ ಪೊಲೀಸರಿಗೆ ಶರಣಾಗಿ ತಪ್ಪೊಪ್ಪಿಕೊಂಡಿದ್ದಾ‌ನೆ.

Vijayaprabha Mobile App free

ಇನ್ನು, ಘಟನಾ ಸ್ಥಳಕ್ಕೆ ಡಿವೈಎಸ್ಪಿ ರವಿ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪಿರಿಯಾಪಟ್ಟಣದಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.