ಬಾಲಿವುಡ್ ಡ್ರಗ್ಸ್ ಪ್ರಕರಣ; ನಟಿ ರಕುಲ್ ಪ್ರೀತ್ ಸಿಂಗ್ ಮತ್ತು ಸಾರಾ ತಪ್ಪಿತಸ್ಥರಲ್ಲ: ಎನ್‌ಸಿಬಿಯಿಂದ ಮಹತ್ವದ ಹೇಳಿಕೆ!

ಮುಂಬೈ: ನಟ ಸುಶಾಂತ್ ಸಿಂಗ್ ಅವರ ಮರಣದ ನಂತರ, ಬಾಲಿವುಡ್ ನಲ್ಲಿ ಡ್ರಗ್ಸ್ ವಿಷಯವು  ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ, ತಾನು ಡ್ರಗ್ಸ್ ಬಳಸುತ್ತಿದ್ದೆ ಮತ್ತು ಸುಶಾಂತ್ ಗೆ ಡ್ರಗ್ಸ್ ಪದಾರ್ಥಗಳನ್ನು ತರಿಸುತ್ತಿದ್ದೆ ಎಂದು ಹೇಳಿದ್ದರು.

ಬಾಲಿವುಡ್‌ನ ಇನ್ನೂ 25 ಮಂದಿ ಸೆಲೆಬ್ರಿಟಿಗಳು ಡ್ರಗ್ ಪೆಡಲ್‌ಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ರಿಯಾ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಕಳೆದ ಎರಡು ಅಥವಾ ಮೂರು ದಿನಗಳಿಂದ ಈ ಸುದ್ದಿ ಹರಿದಾಡುತ್ತಿತ್ತು. ಇದರಲ್ಲಿ ನಟಿ ರಕುಲ್ ಪ್ರೀತ್ ಸಿಂಗ್ ಮತ್ತು ಸಾರಾ ಅಲಿ ಖಾನ್ ಕೂಡ ಇದರಲ್ಲಿದ್ದಾರೆ ಎಂಬ ಸುದ್ದಿ ಕೂಡ ಎಲ್ಲರೂ ಆಶ್ಚರ್ಯಗೊಳಿಸುವಂತೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಎನ್‌ಸಿಬಿ ಅಧಿಕಾರಿಗಳು ಇತ್ತೀಚೆಗೆ ಈ ವಿಷಯದ ಬಗ್ಗೆ ಸಂಚಲನ ಹೇಳಿಕೆ ನೀಡಿದ್ದಾರೆ.

ನಟಿ ರಕುಲ್ ಪ್ರೀತ್ ಸಿಂಗ್ ಮತ್ತು ಸಾರಾ ತಪ್ಪಿತಸ್ಥರಲ್ಲ:

Advertisement

ಎನ್‌ಸಿಬಿ ಉಪನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ಅವರು ಮಾತನಾಡಿ, ಡ್ರಗ್ಸ್ ಕುರಿತು ಮಾಧ್ಯಮಗಳಲ್ಲಿ ಬರುವ ವರದಿಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ ರಿಯಾ ಮಾದಕವಸ್ತು ಕಳ್ಳಸಾಗಣೆದಾರರ ಹೆಸರನ್ನು ಮಾತ್ರ ಹೇಳಿದ್ದು,  25 ಬಾಲಿವುಡ್ ಸೆಲೆಬ್ರಿಟಿಗಳು ಡ್ರಗ್ ಪೆಡಲ್‌ಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಸುದ್ದಿ ನಿಜವಲ್ಲ, ಡ್ರಗ್ಸ್ ಪ್ರಕರಣದಲ್ಲಿ ನಟಿ ರಕುಲ್ ಪ್ರೀತ್ ಸಿಂಗ್ ಮತ್ತು ಸಾರಾ ಅಲಿ ಖಾನ್ ಹೆಸರು ಕೂಡ ಇದರಲ್ಲಿ ಇಲ್ಲ ಎಂದು ಎಂದು ಎನ್‌ಸಿಬಿ ಉಪನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ಅವರು ಸಂಚಲನ ಹೇಳಿಕೆ ನೀಡಿದ್ದಾರೆ.

ಮಲ್ಹೋತ್ರಾ ಅವರು ತಮ್ಮ ಹತ್ತಿರ ಇರುವ ಪಟ್ಟಿಯಲ್ಲಿ ಕೇವಲ ಮಾದಕವಸ್ತು ಕಳ್ಳಸಾಗಣೆದಾರರ ಹೆಸರುಗಳು ಮಾತ್ರ ಇದರಲ್ಲಿವೆ ಎಂದು ಹೇಳಿದ್ದಾರೆ. ಲುನಾವಾಲಾ ಫಾರ್ಮ್ ಹೌಸ್‌ನಲ್ಲಿ ಸುಶಾಂತ್ ಅವರೊಂದಿಗೆ ಬಾಲಿವುಡ್ ತಾರೆಯರು ಡ್ರಗ್ಸ್ ಸೇವಿಸಿದ್ದಾರೆ ಎಂಬ ಸುದ್ದಿ ಕೂಡ ಸುಳ್ಳಾಗಿದೆ. ಇದೆಲ್ಲವೂ ಪ್ರಕರಣವನ್ನು ದಾರಿ ತಪ್ಪಿಸುವ ಪಿತೂರಿ ಎಂದು ಎನ್‌ಸಿಬಿ ಉಪನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ಅವರು ಹೇಳಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ನಟಿ ರಕುಲ್ ಪ್ರೀತ್ ಸಿಂಗ್ ಮತ್ತು ಸಾರಾ ತಪ್ಪಿತಸ್ಥರಲ್ಲ ಎಂದು ತಿಳಿದಾಗಿನಿಂದ ರಕುಲ್ ಪ್ರೀತ್ ಸಿಂಗ್ ಮತ್ತು ಸಾರಾ ಅಲಿ ಖಾನ್ ಎಲ್ಲರ ಪರವಾಗಿ ಹಲವು ನಟ ನಟಿಯರು ಕ್ಷಮೆಯಾಚಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ‘ಕ್ಷಮಿಸಿ ರಕುಲ್, ಕ್ಷಮಿಸಿ ಸಾರಾ’ ಎಂದು ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾರೆ.

ಇದನ್ನು ಓದಿ: ಬಾಲಿವುಡ್ ಪಾರ್ಟಿಗಳಲ್ಲಿ ಡ್ರಗ್ಸ್, ಸಿಗರೇಟ್ ಕಾಮನ್: ಬಾಲಿವುಡ್ ಹಾಟ್ ನಟಿ ಸಂಚಲನ ಹೇಳಿಕೆ!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement