ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ; ರಾಜ್ಯದ ಈ ಸಮುದಾಯ STಗೆ ಸೇರ್ಪಡೆ!

ಹಾವೇರಿ: ರಾಜ್ಯದ ಗಂಗಾಮತವನ್ನು ಶೀಘ್ರವೇ ಎಸ್ಟಿಗೆ ಸೇರಿಸಲಾಗುವುದೆಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಹೌದು, ಹಾವೇರಿಯ ನರಸೀಪುರದ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಈ ಕುರಿತ ಪ್ರಸ್ತಾವನೆ…

basavaraj-bommai-vijayaprabha

ಹಾವೇರಿ: ರಾಜ್ಯದ ಗಂಗಾಮತವನ್ನು ಶೀಘ್ರವೇ ಎಸ್ಟಿಗೆ ಸೇರಿಸಲಾಗುವುದೆಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ಹೌದು, ಹಾವೇರಿಯ ನರಸೀಪುರದ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಈ ಕುರಿತ ಪ್ರಸ್ತಾವನೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ತಲುಪಿದ್ದು, ಅಂತಿಮ ಹಂತದಲ್ಲಿದೆ. ಈ ಕುರಿತು ಸಂಬಂಧಪಟ್ಟ ಸಚಿವರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು, ಗಂಗಾಮತ ಪೀಠಕ್ಕೆ 10 ಕೋಟಿ ರೂ ನೀಡುವುದಾಗಿ ಯಡಿಯೂರಪ್ಪ ಘೋಷಿಸಿದ್ದರು. ಈಗಾಗಲೇ 5 ಕೋಟಿ ರೂ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.