ಧರ್ಮಶಾಲಾದಲ್ಲಿ ನಡೆದ ಭಾರತ- ಶ್ರೀಲಂಕಾ ನಡುವಿನ 2ನೇ ಟಿ20 ಪಂದ್ಯದ ವೇಳೆ ತಲೆಗೆ ಬಾಲ್ ತಗುಲಿ ಗಾಯಗೊಂಡಿದ್ದ ಭಾರತದ ವಿಕೆಟ್ ಕೀಪರ್ ಬ್ಯಾಟ್ಸಮನ್ ಇಶಾನ್ ಕಿಶನ್ ಅವರನ್ನು ಐಸಿಯುಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೌದು, ಲಂಕಾದ ಬೌಲರ್ ಲಹಿರು ಕುಮಾರ ಎಸೆದ 3.2ನೇ ಓವರ್ ನಲ್ಲಿ ಚೆಂಡು ಬೌನ್ಸ್ ಆಗಿ ಬ್ಯಾಟ್ಸಮನ್ ಇಶಾನ್ ಕಿಶನ್ ಹೆಲ್ಮೆಟ್ ಗೆ ಬಡಿದಿತ್ತು. ಈ ಘಟನೆಯ ಬಳಿಕ ಪಂದ್ಯ ಕೆಲಕಾಲ ಸ್ಥಗಿತಗೊಂಡು ಮತ್ತೆ ಆರಂಭವಾಯಿತು.
ಇದೀಗ ಇಶಾನ್ ಕಿಶನ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.