ಬೆಂಗಳೂರು: ಬಿಎಸ್ಸಿ ಅಗ್ರಿ, ಕೃಷಿ ಡಿಪ್ಲೋಮ ಮತ್ತು ತತ್ಸಮಾನ ಕೋರ್ಸ್ ಗಳಲ್ಲಿ ರೈತ, ಕೃಷಿ ಕಾರ್ಮಿಕ ಮಕ್ಕಳಿಗೆ ಮೀಸಲಾತಿ ಹೆಚ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಈ ಹಿಂದೆ ಮೀಸಲಾತಿ ಶೇಕಡಾ 40% ರಷ್ಟು ಇತ್ತು. ಇದರ ಪ್ರಮಾಣ ಶೇಕಡಾ 50 ರಷ್ಟು ಹೆಚ್ಚಿಸಲು ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಅದರಂತೆ ಈಗ ಬಿಎಸ್ಸಿ ಅಗ್ರಿಕಲ್ಚರ್ ಮತ್ತು ಸರಿ ಸಮಾನ ಕೋರ್ಸ್ ಗಳ ಪ್ರವೇಶಕ್ಕೆ ರೈತರ ಮಕ್ಕಳಿಗೆ ಶೇಕಡ 40 ರಿಂದ 50 ರಷ್ಟು ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು
ಸಂಪುಟ ಸಭೆಯ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು?:
* ಅಥಣಿಯಲ್ಲಿ ಪಶು ವೈದ್ಯಕೀಯ ಕಾಲೇಜು, ಅಂಕೋಲಾ ತಾಲೂಕಿನಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಬೃಹತ್ ಬ್ರಿಡ್ಜ್, ಭಟ್ಕಳ ಮತ್ತು ಚಳ್ಳಕೆರೆಯಲ್ಲಿ ಮಿನಿ ವಿಧಾನಸೌಧ, 110 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯಲ್ಲಿ ಆಡಳಿತ ಸೌಧ & 193.65 ಕೋಟಿ ರೂ.ವೆಚ್ಚದಲ್ಲಿ ಹಾಸನ ಏರ್ಪೋರ್ಟ್ ನಿರ್ಮಾಣ.
* ಬಿಎಸ್ಸಿ ಅಗ್ರಿ ಕೋರ್ಸ್ ಗೆ ದಾಖಲಾಗಲು ರೈತರ ಮಕ್ಕಳಿಗೆ ಶೇ.50ರಷ್ಟು ಮೀಸಲಾತಿ,
* ನಾದಿಲ್ವಾರು ನಿಧಿ 2500 ಕೋಟಿ ರೂ.ಗೆ ಹೆಚ್ಚಿಸಲು ನಿರ್ಧಾರ.