ಸಿಡಿ ಕೇಸ್ಗೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದು, ಪ್ರಕರಣದಲ್ಲಿ ಮಹಾನಾಯಕನ ಕೈವಾಡವಿರುವ ಸಾಕ್ಷ್ಯ ಇದೆ. ಪ್ರಕರಣವನ್ನು ಸಿಬಿಐಗೆ ಕೊಡಿಸುತ್ತೇನೆ ಎಂದು ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು, ಸಿಡಿ ಕೇಸ್ನಲ್ಲಿ ಇಬ್ಬರು ಆರೋಪಿಗಳು ಶಿರಾ, ದೇವನಹಳ್ಳಿಯವರು. ದೇವನಹಳ್ಳಿಯ ಆರೋಪಿಯ ಮನೆ ಮೇಲೆ ದಾಳಿ ನಡೆಸಿದಾಗ 100ಕ್ಕೂ ಹೆಚ್ಚು ಸಿಡಿಗಳು ಸಿಕ್ಕಿವೆ. ಡಿಕೆಶಿಗೆ ನನ್ನ ಒಬ್ಬನ ಹೆದರಿಕೆ ಇದೆ. ಇಂತಹ ನೂರು ಸಿಡಿ ಬರಲಿ ನಾನು ಹೆದರಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಕಿಡಿಕಾರಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.