BIG NEWS: ಡಿಕೆಶಿ ಬೆಂಗಾವಲು ವಾಹನ ಮೇಲೆ ದಾಳಿ; ಡಿಕೆಶಿ ತೆರಳುತ್ತಿದ್ದ ಕಾರಿನ ಗಾಜು ಪುಡಿಪುಡಿ

ಬೆಳಗಾವಿ: ಉಪ ಚುನಾವಣೆ ಹಿನ್ನೆಲೆ ಇಂದು ಬೆಳಗಾವಿ ನಗರಕ್ಕೆ ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಸಾಂಬ್ರಾ ವಿಮಾನ…

dk-shivakumar-vijayaprabha

ಬೆಳಗಾವಿ: ಉಪ ಚುನಾವಣೆ ಹಿನ್ನೆಲೆ ಇಂದು ಬೆಳಗಾವಿ ನಗರಕ್ಕೆ ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಿಂದ ಹೋಟೆಲ್ ಗೆ ತೆರಳುತ್ತಿದ್ದ ವೇಳೆ ಡಿಕೆಶಿ ಸ್ವಾಗತಿಸಲು ಬಂದಿದ್ದ ಸ್ಥಳೀಯ ಕಾಂಗ್ರೆಸ್ ನಾಯಕರ & ಬೆಂಗಾವಲು ವಾಹನದ ಮೇಲೆ ಕಲ್ಲೆಸೆತ ನಡೆದಿದ್ದು, ಜಾರಕಿಹೊಳಿ ಬೆಂಬಲಿಗರನ್ನು ತಡೆಯಲು ಪೊಲೀಸರು ಕಸರತ್ತು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಡಿಕೆಶಿ ತೆರಳುತ್ತಿದ್ದ ಕಾರಿನ ಗಾಜು ಪುಡಿಪುಡಿ:

Vijayaprabha Mobile App free

ಇನ್ನು ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಳಗಾವಿ ನಗರಕ್ಕೆ ಪ್ರವೇಶಿಸುವಾಗ ದ್ವಾರದಲ್ಲಿಯೇ ಶಾಸಕ ರಮೇಶ್ ಜಾರಕಿಹೊಳಿ ಅವರ ಬೆಂಬಲಿಗರು ಡಿಕೆಶಿ ಕಾರನ್ನು ತಡೆದಿದ್ದಾರೆ. ಈ ವೇಳೆ ಕಾರಿಗೆ ಗುದ್ದಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಘಟನೆಯಲ್ಲಿ ಡಿಕೆಶಿ ತೆರಳುತ್ತಿದ್ದ ಕಾರಿನ ಗಾಜು ಪುಡಿಪುಡಿಯಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.