ಜಾರಕಿಹೊಳಿ ಸಿಡಿ ಪ್ರಕರಣ: ಸಿಡಿ ಬಿಡುಗಡೆ ಮಾಡಿದವರ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!

ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಕಾಮ ಪುರಾಣದ ಬಗ್ಗೆ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರು ಸಿಡಿ ಬಿಡುಗಡೆ ಮಾಡಿದವರ ವಿರುದ್ಧ 100 ಕೋಟಿ ರೂ.ಮಾನನಷ್ಟ ಹಾಕಲು ಚಿಂತನೆ ನಡೆಸಿರುವುದಾಗಿ…

balachandra-jarkiholi-vijayaprabha-news

ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಕಾಮ ಪುರಾಣದ ಬಗ್ಗೆ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರು ಸಿಡಿ ಬಿಡುಗಡೆ ಮಾಡಿದವರ ವಿರುದ್ಧ 100 ಕೋಟಿ ರೂ.ಮಾನನಷ್ಟ ಹಾಕಲು ಚಿಂತನೆ ನಡೆಸಿರುವುದಾಗಿ ಪ್ರತಿಕ್ರಿಯೇ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಬಾಲಚಂದ್ರ ಜಾರಕಿಹೊಳಿ ಅವರು, ಸಿಡಿ ಕುರಿತು ಸಿಐಡಿ ಅಥವಾ ಸಿಬಿಐ ತನಿಖೆಯಾಗಬೇಕು ಎಂದಿದ್ದು, ಸಿಡಿ ಬಿಡುಗಡೆ ಮಾಡಿದವರ ವಿರುದ್ಧ 100 ಕೋಟಿ ರೂ.ಮಾನನಷ್ಟ ಮೊಕದ್ದಮೆ ಹಾಕಲು ಚಿಂತನೆ ಮಾಡಿದ್ದೇವೆ. ವಕೀಲರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಈ ವಿಡಿಯೋ ಹಿಂದೆ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡವಿದೆ. ಆ ರಾಜಕಾರಣಿ ಬಿಜೆಪಿಯವರಲ್ಲ. ಬೇರೆ ಪಕ್ಷದವರು ಎಂದು ಸ್ಪೋಟಕ ಮಾಹಿತಿ ಹೊರಹಾಕಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.