ಬೆಳಗಾವಿ: ರಾಯಭಾಗ ತಾಲ್ಲೂಕಿನ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಬ್ಬಿನ ಬೆಳೆಯೊಂದಿಗೆ ಅಕ್ರಮವಾಗಿ ಬೆಳೆದಿದ್ದ ಅಪಾರ ಪ್ರಮಾಣದ ಗಾಂಜಾ ಬೆಳೆ ಮೇಲೆ ದಾಳಿ ಮಾಡಿ ಬರೋಬ್ಬರಿ 89 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ತಾಲ್ಲೂಕಿನ ನಂದಿಕುರಳಿ ಗ್ರಾಮದ ಹೊರ ವಲಯದಲ್ಲಿ ರಾಯಪ್ಪ ಸತ್ಯಪ್ಪ ತೋಳಿ ಎಂಬ ರೈತ ತನ್ನ ಕಬ್ಬಿನ ಹೊಲದಲ್ಲಿ ಗಾಂಜಾ ಬೆಳೆ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ರಾಯಭಾಗ ಪೊಲೀಸರು ಅಕ್ರಮವಾಗಿ ಬೆಳೆಯಲಾಗಿದ್ದ ಗಾಂಜಾ ಬೆಳೆಯನ್ನು ಜಪ್ತು ಮಾಡಿದ್ದಾರೆ.
ದಾಳಿ ವೇಳೆ ರೈತನ ಹೊಲದಲ್ಲಿ 9 ಕೆಜಿ ಒಣ ಗಾಂಜಾ ಹಾಗೂ 80 ಕೆಜಿ ಹಸಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.