ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಹಿರಿಯ ನಟಿ ಶ್ರುತಿ ಅವರ ನೇಮಕವನ್ನು ಸರ್ಕಾರ ಹಿಂಪಡೆಯುವ ಮೂಲಕ ಶಾಕ್ ನೀಡಿದ್ದು, ಈ ಸ್ಥಾನಕ್ಕೆ ಅಚ್ಚರಿ ಎಂಬಂತೆ ಸಿಎಂ ಯಡಿಯೂರಪ್ಪ ಅವರ ಮನೆಯಲ್ಲಿ ಸಹಾಯಕರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
ಶನಿವಾರ ಬೆಳಿಗ್ಗೆ ಸರ್ಕಾರ ಈ ಆದೇಶ ಹೊರಡಿಸಿದ್ದು, ಭಾನುವಾರ ರಾತ್ರಿ ಮಾಧ್ಯಮದಿಂದ ಈ ವಿಷಯ ನಟಿ ಶ್ರುತಿ ಅವರ ಗಮನಕ್ಕೆ ಬಂದಿದೆ. ವಿಷಯ ತಿಳಿದ ಹಿರಿಯ ನಟಿ ಶೃತಿ ಅವರು ಸಹ ಆಶ್ಚರ್ಯಪಟ್ಟಿದ್ದಾರೆ. ಇನ್ನು, ಶ್ರುತಿಯವರಿಗೆ ಬೇರೆ ಸ್ಥಾನ ನೀಡಲ್ಲ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.