ಮಹಾಲಿಂಗಪುರ ಪುರಸಭೆ ಸದಸ್ಯೆಯ ಮೇಲೆ ಬಿಜೆಪಿ ಬೆಂಬಲಿಗರ ದೌರ್ಜನ್ಯ; ಇದು ಬಿಜೆಪಿ ಸಂಸ್ಕೃತಿಯೆಂದ ಡಿ ಕೆ ಶಿವಕುಮಾರ್

ಬಾಗಲಕೋಟೆ: ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂಬಂಧ ತೇರದಾಳ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಸದಸ್ಯೆಯನ್ನು ಕೈ ಹಿಡಿದು ಎಳೆದಾಡಿದ್ದಾರೆ. ಅಲ್ಲದೆ, ಈ ವೇಳೆ ಕೆಲವರು…

ಬಾಗಲಕೋಟೆ: ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂಬಂಧ ತೇರದಾಳ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಸದಸ್ಯೆಯನ್ನು ಕೈ ಹಿಡಿದು ಎಳೆದಾಡಿದ್ದಾರೆ. ಅಲ್ಲದೆ, ಈ ವೇಳೆ ಕೆಲವರು ಮಹಿಳೆಯನ್ನು ಹೊತ್ತೊಯ್ದಿರುವ ಅಮಾನವೀಯ ಘಟನೆ ಕೂಡಾ ನಡೆದಿದ್ದು, ರಾಜ್ಯವನ್ನೇ ತಲೆತಗ್ಗಿಸುವಂತೆ ಮಾಡಿದೆ. ‘ತನಗೆ ಶಾಸಕರು ಮತ್ತು ಅವರ ಬೆಂಬಲಿಗರು ದೈಹಿಕವಾಗಿ ಹಿಂಸಿಸಿದ್ದಾರೆ. ಉಸಿರುಗಟ್ಟಿದರೂ ಬಿಡಲಿಲ್ಲ’ ಅಂತ ಮಹಿಳೆ ಆರೋಪಿಸಿದ್ದಾರೆ.

ಅದು ಬಿಜೆಪಿ ಪಕ್ಷದ ಸಂಸ್ಕೃತಿಯನ್ನು ತೋರಿಸುತ್ತದೆ: ಡಿಕೆ ಶಿವಕುಮಾರ್

ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂಬಂಧ ತೇರದಾಳ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಸದಸ್ಯೆಯ ಮೇಲೆ ನಡೆಸಿದ ದೌರ್ಜನ್ಯವನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದು, ‘ಅದು ಬಿಜೆಪಿ ಪಕ್ಷದ ಸಂಸ್ಕೃತಿಯನ್ನು ತೋರಿಸುತ್ತದೆ’ ಎಂದು ಹರಿಹಾಯ್ದಿದ್ದಾರೆ. ‘ನಾವು ಯಾರಿಗೆ ಏನು ಬೇಕಾದರೂ ಮಾಡಬಹುದು ಎನ್ನುವ ಪ್ರವೃತ್ತಿ ಅವರದು. ಬಿಜೆಪಿಯ ಯಾವ ಶಾಸಕರೂ, ಜನಪ್ರತಿನಿಧಿಗಳೂ ಯಾರ ನಿಯಂತ್ರಣದಲ್ಲಿಯೂ ಇಲ್ಲ’ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.