ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯರ ಆತ್ಮಹತ್ಯೆ ಕುರಿತು ಪೋಸ್ಟ್ ಮಾರ್ಟಮ್ ಮಾಡಿದ್ದ ಬೌರಿಂಗ್ ಆಸ್ಪತ್ರೆ ವೈದ್ಯ ಡಾ.ಸತೀಶ್ ಮಹತ್ವದ ಮಾಹಿತಿ ನೀಡಿದ್ದಾರೆ.
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಗೆ ಕುತ್ತಿಗೆ ಮೇಲೆ ಮಾತ್ರವೇ ಗಾಯವಿದ್ದು, ದೇಹದ ಇತರೆ ಭಾಗದಲ್ಲಿ ಗಾಯಗಳಾಗಿಲ್ಲ. ಮೂವರು ವೈದ್ಯರ ತಂಡ ಮರಣೋತ್ತರ ಪರೀಕ್ಷೆ ಮಾಡಿದ್ದು, ಎಲ್ಲವನ್ನೂ ಚಿತ್ರೀಕರಿಸಲಾಗಿದೆ.
ಇನ್ನು, ಸೌಂದರ್ಯ ಅವರ ಆತ್ಮಹತ್ಯೆಗೆ ಕಾರಣವೇನು ಎಂಬ ಬಗ್ಗೆ ಬೆಂಗಳೂರು ಉತ್ತರ ತಾಲೂಕಿನ ವಿಶೇಷ ತಹಶೀಲ್ದಾರ್ ಗೆ ವರದಿ ಸಲ್ಲಿಸಿದ್ದೇವೆ ಎಂದು ಬೌರಿಂಗ್ ಆಸ್ಪತ್ರೆ ವೈದ್ಯ ಡಾ.ಸತೀಶ್ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




