ಬಿಜೆಪಿ ಕೈಗೊಂಬೆಯಾದ ಸಿಬಿಐ; ರಾಜಕೀಯ ಪ್ರೇರಿತ ದಾಳಿಗೆ ಖಂಡನೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರ ಮನೆಯ ಮೇಲೆ ಇಂದು ಬೆಳಗ್ಗೆ ಸಿಬಿಐ ಅಧಿಕಾÀರಿಗಳು ದಾಳಿ ನಡೆಸಿರುವುದಕ್ಕೆ ಕಾಂಗ್ರೆಸ್ ಪಾಳೆಯದಿಂದ ರಾಜ್ಯಾದ್ಯಂತ ಆಕ್ರೋಶ್ಯ ವ್ಯಕ್ತವಾಗಿದೆ. ಸದ್ಯ ಡಿ.ಕೆ.ಶಿವಕುಮಾರ್ ಅವರನ್ನು ಯಾವುದೇ ಸಂದರ್ಭದಲ್ಲಿ…

dk-shivakumar-vijayaprabha

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರ ಮನೆಯ ಮೇಲೆ ಇಂದು ಬೆಳಗ್ಗೆ ಸಿಬಿಐ ಅಧಿಕಾÀರಿಗಳು ದಾಳಿ ನಡೆಸಿರುವುದಕ್ಕೆ ಕಾಂಗ್ರೆಸ್ ಪಾಳೆಯದಿಂದ ರಾಜ್ಯಾದ್ಯಂತ ಆಕ್ರೋಶ್ಯ ವ್ಯಕ್ತವಾಗಿದೆ.

ಸದ್ಯ ಡಿ.ಕೆ.ಶಿವಕುಮಾರ್ ಅವರನ್ನು ಯಾವುದೇ ಸಂದರ್ಭದಲ್ಲಿ ಬಂಧನ ಮಾಡುವ ಸಂಭವವಿದ್ದು, ಡಿ.ಕೆ.ಶಿವಕುಮಾರ್ ಅವರ ಮನೆ ಮುಂದೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ. ಸಿಬಿಯ ಅಧಿಕಾರಿಗಳನ್ನು ಕೈಗೊಂಬೆ ಮಾಡಿಕೊಂಡಿರುವ ಬಿಜೆಪಿ ಸರ್ಕಾರ ವ್ಯವಸ್ಥಿತ ಸಂಚು ರೂಪಿಸುತ್ತಿದೆ. ಇದು ಖಂಡನೀಯ. ಕೇವಲ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ನಡೆಯ ವಿರುದ್ಧ ಘೋಷನೆ ಕೂಗಲಾಗುತ್ತಿದೆ. ಡಿ.ಕೆ.ಶಿವಕುಮಾರ್ ಪರವಾಗಿ ಘೋಷಣೆ ಕೂಗುತ್ತಿರುವ ಕಾರ್ಯಕರ್ತರು ಡಿಕೆಶಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಉಪ ಚುನಾವಣೆ ವೇಳೆ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ನಾಯರು ವ್ಯವಸ್ಥಿ ಸಂಚು ರೂಪಿಸಿದ್ದಾರೆ. ಇದಕ್ಕೆ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಹೆದರುವುದಿಲ್ಲ. ಬಿಜೆಪಿ ಕುತಂತ್ರ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.