ಬೆಂಗಳೂರು: ನನ್ನ ತಂದೆ-ತಾಯಿಗೆ ರಕ್ಷಣೆ ಕೊಡಿ. ಅವರ ರಕ್ಷಣೆಯೇ ನನಗೆ ಮುಖ್ಯ ಎಂದು ವಿಡಿಯೋ ಮೂಲಕ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ (ಸಿಡಿ ಲೇಡಿ) ಮನವಿ ಮಾಡಿಕೊಂಡಿದ್ದಾರೆ.
ವಿಡಿಯೋ ಬಿಡುಗಡೆ ಮಾಡಿರುವ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ, ನನ್ನ ಅಪ್ಪ-ಅಮ್ಮ ಸುರಕ್ಷವಾಗಿದ್ದಾರೆ ಎಂದು ಗೊತ್ತಾದ ಮೇಲೆ ಎಸ್ ಐಟಿ ಮುಂದೆ ವಿಚಾರಣೆಗೆ ಬರ್ತೀನಿ ಎಂದಿದ್ದಾಳೆ. ಸಿದ್ದರಾಮಯ್ಯ, ಡಿಕೆಶಿ, ರಮೇಶ್ ಕುಮಾರ್ ಮತ್ತು ಮಹಿಳಾ ಸಂಘಟನೆಯವರಿಗೆ ಕೇಳಿಕೊಳ್ಳೋದು ಏನೆಂದರೆ ತನ್ನ ಪಾಲಕರಿಗೆ ರಕ್ಷಣೆ ಕೊಡಿ ಎಂದಿರುವ ಸಿಡಿ ಲೇಡಿ, ಎಸ್ ಐಟಿ ತನಿಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ನನಗೆ ನ್ಯಾಯ ಸಿಗುವ ನಂಬಿಕೆಯಿದೆ ಎಂದು ಹೇಳಿದ್ದಾಳೆ.
ಏನಾಗುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ:
ಇನ್ನು ಮಾರ್ಚ್ 12 ರಂದೇ ನಗರ ಪೊಲೀಸ್ ಆಯುಕ್ತರಿಗೆ ವಿಡಿಯೋ ಕಳಿಸಿದ್ದೆ. ಆದರೆ, ಮಾರ್ಚ್ 13 ರಂದು ರಮೇಶ್ ಜಾರಕಿಹೊಳಿ ದೂರು ನೀಡಿದ ಬಳಿಕ ನನ್ನ ವಿಡಿಯೋ ರಿಲೀಸ್ ಮಾಡಲಾಗಿದೆ.
ಹೀಗಾಗಿ, ಏನಾಗುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಎಸ್ ಐಟಿ ಯಾರ ಪರವಾಗಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾಳೆ.