ನೌಕರರಿಗೆ CM ಸಿಹಿ ಸುದ್ದಿ: ವೇತನ ಹೆಚ್ಚಳ; ಆದರೂ ಬಂದ್‌ ಮುಂದುವರಿಕೆ

ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಶೇ.40ರಷ್ಟು ವೇತನ ಹೆಚ್ಚಳ ಮಾಡಲು ನೌಕರರು ಪಟ್ಟು ಹಿಡಿದಿದ್ದು, ಶೇ.17ರಷ್ಟು ಹೆಚ್ಚು ಹೆಚ್ಚಳ ಮಾಡಲು ಸಿಎಂ ಬಸವರಾಜ್ ಬೊಮ್ಮಾಯಿ…

basavaraj-bommai-vijayaprabha

ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಶೇ.40ರಷ್ಟು ವೇತನ ಹೆಚ್ಚಳ ಮಾಡಲು ನೌಕರರು ಪಟ್ಟು ಹಿಡಿದಿದ್ದು, ಶೇ.17ರಷ್ಟು ಹೆಚ್ಚು ಹೆಚ್ಚಳ ಮಾಡಲು ಸಿಎಂ ಬಸವರಾಜ್ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ.

ಹಣಕಾಸು ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಸಿಎಂ ನಿರ್ಧರಿಸಿದ್ದು, ಈ ಕುರಿತು ಮಧ್ಯಂತರ ಆದೇಶ ನೀಡಲು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ವೇತನ ಹೆಚ್ಚಳ..ಬಂದ್‌ ಮುಂದುವರಿಕೆ

Vijayaprabha Mobile App free

ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಸಿಎಂ ಘೋಷಣೆ ಮಾಡಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಇದು ಕೇವಲ ಭರವಸೆ ಆಗಿ ಉಳಿಯಬಾರದು. ಆದೇಶ ಆದ ಮೇಲೆ ನಾವು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ.

ಶೀಘ್ರ ಅಂದರೆ ಯಾವಾಗ? ಅದನ್ನು ಆದೇಶ ರೂಪದಲ್ಲಿ ಜಾರಿಯಾಗಲಿ ಎಂದು ಅವರು ತಿಳಿಸಿದ್ದಾರೆ. ಅಲ್ಲಿಯವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.