ಬೆಂಗಳೂರು: ಶಿಲ್ಪಾನಾಗ್ ಒಳ್ಳೆಯ ಅಧಿಕಾರಿ, ಉತ್ತಮ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿಯೂ ಕೆಲಸ ಮಾಡಿದ್ದರು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಪರ ಬ್ಯಾಟ್ ಬೀಸಿದ್ದಾರೆ.
ಇನ್ನು, ಡಿಸಿ ರೋಹಿಣಿ ಸಿಂಧೂರಿ ಬಗ್ಗೆ ನನಗೆ ಗೊತ್ತಿಲ್ಲ. ಅವರ ವಿರುದ್ಧ ಪಕ್ಷಾತೀತವಾಗಿ ಟೀಕೆ ಮಾಡುತ್ತಿದ್ದು ಸಿಎಂ ಯಡಿಯೂರಪ್ಪ ಸಂಪುಟ ಸಭೆ ಕರೆದು ಈ ಸಮಸ್ಯೆ ಬಗೆಹರಿಸುತ್ತಾರೆ. ಅಧಿಕಾರಿಗಳು ಬಹಿರಂಗವಾಗಿ ಸುದ್ದಿಗೋಷ್ಠಿ ಮಾಡಿದ್ದು ತಪ್ಪು ಎಂದು ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ಇಂಧನ ಬೆಲೆ ಏರಿಕೆ ಯಾಕಾಗುತ್ತಿದೆಯೋ ಗೊತ್ತಿಲ್ಲ: ಈಶ್ವರಪ್ಪ
ಇನ್ನು, ಪೆಟ್ರೋಲ್ & ಡೀಸಲ್ ಬೆಲೆ ಪದೇಪದೆ ಏಕೆ ಏರಿಕೆಯಾಗುತ್ತಿದೆಯೋ ಗೊತ್ತಿಲ್ಲ. ಇಂಧನ ಬೆಲೆ ಏರಿಕೆ, ಇಳಿಕೆಯು ಕೇಂದ್ರ ಸರ್ಕಾರದ ನಿಯಂತ್ರಣದಲ್ಲೇ ಇರುತ್ತದೆ. ಈ ಬಗ್ಗೆ ಕೇಂದ್ರ ಹಣಕಾಸು ಸಚಿವರಿಗೆ ಮಾಹಿತಿ ಇರುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಯಾರೊಬ್ಬರೂ ಹೇಳಿಕೆ ನೀಡಬಾರದೆಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈಗಾಗಲೇ ಸ್ಪಷ್ಟವಾಗಿ ಸೂಚಿಸಿದ್ದಾರೆ ಎಂದು ಹೇಳಿದರು.