ಚಾಮರಾಜನಗರ: ಬಂದೀಪುರಕ್ಕೆ ಆಗಮಿಸಿದ್ದ ದಂಪತಿ ಹಾಗೂ 10 ವರ್ಷದ ಬಾಲಕ ನಾಪತ್ತೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರಕ್ಕೆ ಆಗಮಿಸಿದ್ದ ಕುಟುಂಬವು ಭಾನುವಾರ ರಾತ್ರಿ ರೆಸಾರ್ಟ್ನಲ್ಲಿ ತಂಗಿತ್ತು.
ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಬಳಿಯ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲಿ ತಂಗಿದ್ದ ಕುಟುಂಬವನ್ನು ಸೋಮವಾರ ಮಧ್ಯಾಹ್ನ ಅಪಹರಿಸಲಾಗಿದೆ ಎಂದು ಶಂಕಿಸಲಾಗಿದೆ. ಬೆಂಗಳೂರು ಮೂಲದ ಜೆ.ನಿಶಾಂತ್(40) ಮತ್ತು ಅವರ ಪತ್ನಿ ಮತ್ತು ಮಗ ನಾಪತ್ತೆಯಾಗಿದ್ದಾರೆ.
ಜೆ.ನಿಶಾಂತ್ ಅವರ ಲಗೇಜ್ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲಿದೆ. ಚಾಮರಾಜನಗರ ಎಸ್ಪಿ ಡಾ. B.T.ಕವಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.