ಭಾರತಕ್ಕಾದ ಹಾನಿಯನ್ನು ಕ್ರಿಕೆಟಿಗರಿಂದ ಸರಿಪಡಿಸಲು ಸಾಧ್ಯವಿಲ್ಲ: ಶಶಿ ತರೂರ್

ನವದೆಹಲಿ: ಹೊಸ ಕೃಷಿ ಕಾಯ್ದೆಗಳ ಮತ್ತು ರೈತರ ಪ್ರತಿಭಟನೆ ಕುರಿತು ಅಮೆರಿಕಾದ ಪಾಪ್ ಗಾಯಕಿ ರಿಹಾನಾ,ಸ್ವೀಡನ್ ಪರಿಸರವಾದಿ ಗ್ರೇಟಾ ತನ್‌ಬರ್ಗ್ ಟ್ವೀಟ್ ಮಾಡಿದ ನಂತರ ಮಾಜಿ ಕ್ರಿಕೆಟರ್ ಸಚಿನ್ ತೆಂಡುಲ್ಕರ್ ಸೇರಿದಂತೆ ಭಾರತದ ಸೆಲೆಬ್ರಿಟಿಗಳೆಲ್ಲ…

Shashi Tharoor vijayaprabha

ನವದೆಹಲಿ: ಹೊಸ ಕೃಷಿ ಕಾಯ್ದೆಗಳ ಮತ್ತು ರೈತರ ಪ್ರತಿಭಟನೆ ಕುರಿತು ಅಮೆರಿಕಾದ ಪಾಪ್ ಗಾಯಕಿ ರಿಹಾನಾ,ಸ್ವೀಡನ್ ಪರಿಸರವಾದಿ ಗ್ರೇಟಾ ತನ್‌ಬರ್ಗ್ ಟ್ವೀಟ್ ಮಾಡಿದ ನಂತರ ಮಾಜಿ ಕ್ರಿಕೆಟರ್ ಸಚಿನ್ ತೆಂಡುಲ್ಕರ್ ಸೇರಿದಂತೆ ಭಾರತದ ಸೆಲೆಬ್ರಿಟಿಗಳೆಲ್ಲ ಒಟ್ಟಾಗಿ ವಿದೇಶಿಯರ ಅಪಪ್ರಚಾರದ ವಿರುದ್ಧ ಟ್ವೀಟ್ ಮಾಡಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಅವರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿ, ಭಾರತ ಸರ್ಕಾರವು ವಿದೇಶಿಯರಿಗೆ ದೇಶದ ಸೆಲೆಬ್ರೆಟಿಗಳು ಪ್ರತಿಕ್ರಿಯಿಸುವಂತೆ ಮಾಡುತ್ತಿರುವುದು ನಿಜಕ್ಕೂ ಮುಜುಗರವನ್ನುಂಟು ಮಾಡುತ್ತಿದೆ. ಭಾರತದ ಜಾಗತಿಕ ಚಿತ್ರಣಕ್ಕೆ ಉಂಟಾಗಿರುವ ಹಾನಿಯನ್ನು ಕ್ರಿಕೆಟಿಗರ ಟ್ವೀಟ್‌ನಿಂದ ಸರಿಪಡಿಸಲು ಸಾಧ್ಯವಿಲ್ಲ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಹರಿಹಾಯ್ದಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.