ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟ; 12 ಮಕ್ಕಳು ಸೇರಿ 17 ಜನರಿಗೆ ಗಂಭೀರ ಗಾಯ!

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಪೋಟವಾದ ಪರಿಣಾಮ 17 ಜನರಿಗೆ ಗಾಯವಾದ ಘಟನೆ ನಡೆದಿದೆ. ಹೌದು, ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪ್ ನಲ್ಲಿ ಈ ದುರ್ಘಟನೆ ಜರುಗಿದ್ದು, ಯುಕೆಪಿ…

Blast-vijayaprabha-news

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಪೋಟವಾದ ಪರಿಣಾಮ 17 ಜನರಿಗೆ ಗಾಯವಾದ ಘಟನೆ ನಡೆದಿದೆ.

ಹೌದು, ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪ್ ನಲ್ಲಿ ಈ ದುರ್ಘಟನೆ ಜರುಗಿದ್ದು, ಯುಕೆಪಿ ಕ್ಯಾಂಪ್ ನ ನಿವೃತ್ತ ನೌಕರ ಅವರ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಸಾಹೇಬ ಗೌಡ ಎಂಬುವರ ಅವರ ಸೊಸೆಯ ಸೀಮಂತ ಕಾರ್ಯಕ್ರಮ ನಡೆಸಲಾಗುತಿತ್ತು.

ಈ ವೇಳೆ ಅಡುಗೆ ಮಾಡಲು ತಂದಿಟ್ಟಿದ್ದ ಸಿಲಿಂಡರ್ ಸೋರಿಕೆಯಾಗಿ ಸ್ಪೋಟವಾಗಿದ್ದು, ಸಿಲಿಂಡರ್ ಬ್ಲಾಸ್ಟ್ ನಿಂದ ಟೆಂಟ್, ಬೈಕ್ ಹಾಗೂ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ತಗುಲಿದ್ದು, 12 ಮಕ್ಕಳು ಸೇರಿ 17 ಜನರಿಗೆ ಗಾಯವಾಗಿದ್ದು, ಗಾಯಗೊಂಡವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.