ದಾವಣಗೆರೆ (ಉದ್ಯೋಗ ಸುದ್ದಿ): ಕೆಲಸದ ಹುಡುಕಾಟದಲ್ಲಿರುವ ಯುವಕ-ಯುವತಿಯರಿಗೆ ದಾವಣಗೆರೆ ಜಿಲ್ಲಾಡಳಿತ ಭರ್ಜರಿ ಸಿಹಿಸುದ್ದಿ ನೀಡಿದೆ. ಹೌದು, ದಾವಣಗೆರೆ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಮಿಷನ್ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 23 ರಂದು ನಗರದಲ್ಲಿ ‘ಬೃಹತ್ ಉದ್ಯೋಗ ಮೇಳ’ (Mega Job Fair) ಆಯೋಜಿಸಲಾಗಿದೆ.
ಇದನ್ನೂ ಓದಿ: RBI Recruitment 2026: ಡಿಗ್ರಿ ಆಗಿದ್ರೂ ಸಾಕು, ಆರ್ಬಿಐ (RBI) ನಲ್ಲಿ ಭರ್ಜರಿ ನೇಮಕಾತಿ: ಈಗಲೇ ಅರ್ಜಿ ಸಲ್ಲಿಸಿ
ಹಲವು ಪ್ರತಿಷ್ಠಿತ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು, ನಿರುದ್ಯೋಗಿ ಯುವಜನತೆಗೆ ಸ್ಥಳೀಯವಾಗಿ ಹಾಗೂ ರಾಜ್ಯಾದ್ಯಂತ ಉದ್ಯೋಗ ಪಡೆಯಲು ಇದೊಂದು ಸುವರ್ಣಾವಕಾಶವಾಗಿದೆ.

ಉದ್ಯೋಗ ಮೇಳದ ಸಂಪೂರ್ಣ ವಿವರ:
- ದಿನಾಂಕ: ಫೆಬ್ರವರಿ 23
- ಸಮಯ: ಬೆಳಿಗ್ಗೆ 11:00 ಗಂಟೆಗೆ.
- ಸ್ಥಳ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಡೆಂಟಲ್ ಕಾಲೇಜು ರಸ್ತೆ, ಎಂ.ಸಿ.ಸಿ. ಬಿ-ಬ್ಲಾಕ್, ದಾವಣಗೆರೆ.
ಯಾರ್ಯಾರು ಭಾಗಿ?
ಈ ಬೃಹತ್ ಉದ್ಯೋಗ ಮೇಳವನ್ನು ಗಣಿ, ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಉದ್ಘಾಟಿಸಲಿದ್ದು, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಇನ್ನು, ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ (Resume), ಆಧಾರ್ ಕಾರ್ಡ್ ಹಾಗೂ ಅಗತ್ಯ ಶೈಕ್ಷಣಿಕ ದಾಖಲೆಗಳೊಂದಿಗೆ ಈ ಮೇಳದಲ್ಲಿ ಪಾಲ್ಗೊಂಡು ಉದ್ಯೋಗಾವಕಾಶದ ಸದುಪಯೋಗ ಪಡೆದುಕೊಳ್ಳಬಹುದು.




