ಜೈಪುರ: ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಅಪಘಾತದಿಂದ ಥಸಂಭವಿಸಿದ ಗಂಭೀರ ಅಪಘಾತದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಟ್ಯಾಂಕರ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದ್ದು, ಇದು ದೊಡ್ಡ ಸ್ಫೋಟ ಮತ್ತು ಉರಿಯುತ್ತಿರುವ ಬೆಂಕಿಗೆ ಕಾರಣವಾಯಿತು. ಸಿ.ಸಿ.ಟಿ.ವಿ ದೃಶ್ಯಾವಳಿಗಳು ಬೆಂಕಿಯ ಜ್ವಾಲೆ ವೇಗವಾಗಿ ಹರಡುತ್ತಿರುವುದನ್ನು ತೋರಿಸಿದರೆ, ದಟ್ಟವಾದ ಹೊಗೆ ಆ ಪ್ರದೇಶವನ್ನು ತುಂಬಿಕೊಂಡಿದ್ದು, ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ. ಬೆಂಕಿಯಿಂದ ಉಂಟಾದ ವಿವಿಧ ಗಾಯಗಳಿಂದಾಗಿ ಒಟ್ಟು 43 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಕಿಯು ಹೆದ್ದಾರಿಯ 300 ಮೀಟರ್ ಭಾಗದ ಮೇಲೆ ಪರಿಣಾಮ ಬೀರಿದ್ದು, ಸುಮಾರು ಒಂದು ಕಿಲೋಮೀಟರ್ ದೂರದಿಂದ ಬೆಂಕಿಯ ಜ್ವಾಲೆ ಕಾಣಿಸಿದ್ದರಿಂದ ಗಮನಾರ್ಹ ಸಂಚಾರ ದಟ್ಟಣೆ ಉಂಟಾಯಿತು. ಬೆಂಕಿಯಲ್ಲಿ ಅನೇಕ ವಾಹನಗಳು ನಾಶವಾಗಿ, ಅಧಿಕಾರಿಗಳು ದೊಡ್ಡ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ.
ಭಾರತದ ಗೃಹ ಸಚಿವ ಅಮಿತ್ ಶಾ ಅವರು ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮತ್ತು ರಾಜಸ್ಥಾನದ ಮುಖ್ಯಮಂತ್ರಿಯೊಂದಿಗೆ ಪರಿಸ್ಥಿತಿಯನ್ನು ಚರ್ಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡಲು ಕೆಲಸ ಮಾಡುತ್ತಿದೆ ಎಂದು ಹೇಳಿದರು.