ನವದೆಹಲಿ: ಕೃಷಿ ಮಸೂದೆ ವಿರೋಧಿಸಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಹಿಂಸಾಚಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು, ಇದೀಗ ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.
ಗಲಭೆಯ ಸೂತ್ರದಾರನೆಂದು ಹೇಳಲಾಗುತ್ತಿರುವ ಪಂಜಾಬಿ ನಟ ದೀಪ್ ಸಿಧು ಸದ್ಯ ತಲೆಮರೆಸಿಕೊಂಡಿದ್ದು, ಆತನ ಮಾಹಿತಿ ನೀಡಿದವರಿಗೆ 1 ಲಕ್ಷ ರೂ.ಗಳ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ನಟ ದೀಪ್ ಸಿಧು ಮಾತ್ರವಲ್ಲದೆ, ಈತನೊಂದಿಗೆ ಇನ್ನು ಮೂವರು ಆರೋಪಿಗಳ ಮಾಹಿತಿ ನೀಡಿದವರಿಗೂ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.